News Karnataka Kannada
Sunday, May 05 2024
ಮಂಗಳೂರು

ಜನರಿಗೆ ನರೇಂದ್ರ ಮೋದಿ ಗ್ಯಾರಂಟಿ ಮೇಲೆ ವಿಶ್ವಾಸವಿದೆ: ಡಿಸಿಎಂ ದೇವೇಂದ್ರ

ಮಂಗಳೂರಿನಲ್ಲಿ ನಡೆಯುತ್ತಿರುವ ಬಿಜೆಪಿ ಬೂತ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಭಾಗಿಯಾಗಿರುವ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಅವರು ಮಾತನಾಡಿ, ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ವಿಫಲವಾಗಿದೆ.ಹೀಗಾಗಿ ಜನರಿಗೆ ನರೇಂದ್ರ ಮೋದಿ ಗ್ಯಾರಂಟಿ ಮೇಲೆ ಮಾತ್ರ ವಿಶ್ವಾಸವಿದೆ.ಹೀಗಾಗಿ ರಾಜ್ಯದ ಜನತೆ ನರೇಂದ್ರ ಮೋದಿ ಜೊತೆಗಿದೆ ಎಂದರು.
Photo Credit : News Kannada

ಮಂಗಳೂರು: ಮಂಗಳೂರಿನಲ್ಲಿ ನಡೆಯುತ್ತಿರುವ ಬಿಜೆಪಿ ಬೂತ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಭಾಗಿಯಾಗಿರುವ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಅವರು ಮಾತನಾಡಿ, ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ವಿಫಲವಾಗಿದೆ. ಹೀಗಾಗಿ ಜನರಿಗೆ ನರೇಂದ್ರ ಮೋದಿ ಗ್ಯಾರಂಟಿ ಮೇಲೆ ಮಾತ್ರ ವಿಶ್ವಾಸವಿದೆ. ಹಾಗಾಗಿ ರಾಜ್ಯದ ಜನತೆ ನರೇಂದ್ರ ಮೋದಿ ಜೊತೆ ಇರುತ್ತಾರೆ ಎಂದರು.

ರಾಷ್ಟ್ರೀಯ ಭದ್ರತೆಯ ವಿಷಯದಲ್ಲಿ ಎಲ್ಲಾ ರಾಜ್ಯಗಳು ಬೆಂಬಲ ಕೊಡಲಿದೆ. ವೋಟ್ ಬ್ಯಾಂಕ್ ಗಾಗಿ ದೇಶದ್ರೋಹಿಗಳನ್ನ ಯಾರೂ ಬೆಂಬಲಿಸಬಾರದು, ಯಾವುದೇ ದೇಶ ವಿರೋಧಿ ಘಟನೆಗಳನ್ನು ಆಯಾ ಸರ್ಕಾರಗಳು ಖಂಡಿಸಬೇಕು. ಹರ್ಯಾಣ ಸಿಎಂ ರಾಜೀನಾಮೆ ವಿಚಾರವಾಗಿ ಮಾತನಾಡಿದ ಅವರು, ಪಕ್ಷದಲ್ಲಿ ಇಂಥದ್ದು ಆಗುತ್ತದೆ. ಟಿಕೆಟ್ ವಿಚಾರದಲ್ಲಿ ಚರ್ಚಿಸಿ ನಂತರ ಪಕ್ಷ ಸೂಕ್ತ ನಿರ್ಧಾರ ಮಾಡಲಿದೆ ಎಂದು ಹೇಳಿಕೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು