News Karnataka Kannada
Saturday, May 04 2024
ಮಂಗಳೂರು

ಮಂಗಳೂರು: ಮುಂಜಾನೆ ಸುರಿದ ಭಾರೀ ಮಳೆಗೆ ಹಲವು ಮನೆಗಳು ಜಲಾವೃತ

Mangaluru: Deputy Commissioner (DC) Dr. K.V. Rajendra has declared a holiday due to heavy rains in the early hours of the morning.
Photo Credit : News Kannada

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಮಳೆಯಾದ ಹಿನ್ನಲೆಯಲ್ಲಿ ಮಂಗಳೂರು, ಉಳ್ಳಾಲ, ಬಂಟ್ಬಾಳ, ಮೂಲ್ಕಿ, ಮೂಡುಬಿದಿರೆ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು (ಜು.30) ರಜೆ ಸಾರಲಾಗಿದೆ. ಇನ್ನುಳಿದಂತೆ ಪುತ್ತೂರು, ಸುಳ್ಯ, ಬೆಳ್ತಂಗಡಿ ವ್ಯಾಪ್ತಿಯ ತಹಶೀಲ್ದಾರರು, ಬಿಇಒ ಅಲ್ಲಿಯ ಪರಿಸ್ಥಿತಿ ನೋಡಿ ರಜೆ ನಿರ್ಧರಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ‌. ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲಾದ್ಯಂತ ಇಂದು ಮುಂಜಾನೆ ಸುರಿದ ಭಾರೀ ಮಳೆಗೆ. ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಸಹಿತ ನಗರದ ಬಹುತೇಕ ಕಡೆಗಳಲ್ಲಿ ನೀರು ನಿಂತಿದ್ದು, ಪಾದಚಾರಿ, ವಾಹನ ಸವಾರರು ಸಂಕಷ್ಟಪಡುವಂತಾಯಿತು. ನಗರದ ಪಾಂಡೇಶ್ವರ ಸಮೀಪ ಶಿವನಗರ ಸುತ್ತಮುತ್ತಲಿನ ಹಲವು ಮನೆಗಳು ಜಲಾವೃತಗೊಂಡಿದ್ದವು. ಮನೆಯಲ್ಲಿರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲಾಗದೆ ಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದರು.  ಕೆಲವು ಕಡೆ ಮರ ಉರುಳಿ ಬಿದ್ದಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಪಂಪ್‌ವೆಲ್, ಕರಂಗಲ್ಪಾಡಿಯಲ್ಲೂ ಕೃತಕ ನೆರೆಯಾಗಿತ್ತೂ.

ಆದರೆ ಈಗ ಮಳೆ ಇಲ್ಲದ ಕಾರಣ ಎಲ್ಲಾ ರೀತಿಯ ಪರಿಸ್ಥಿತಿ ಯು ಹತೋಟಿಗೆ ಬಂದಿದ್ದು, ಸೂರ್ಯನ ಬಿಸಿಲೂ ನೆತ್ತಿಯನ್ನು ಸುಡುವಂತಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು