ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ ಅವರು ಕರ್ನಾಟಕ ಅಬಕಾರಿ ಕಾಯ್ದೆ 1965 ಸೆಕ್ಷನ್ 21(1)ರ ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಯಾವುದೇ ರೀತಿಯ ಮದ್ಯ ಮಾರಾಟ, ದಾಸ್ತಾನು, ಸಾಗಾಣಿಕೆಯನ್ನು ನಿರ್ಬಂಧಿಸಿ ಹಾಗೂ ಜಿಲ್ಲೆಯಾದ್ಯಂತ ಕಾರ್ಯಾಚರಿಸುತ್ತಿರುವ ಎಲ್ಲ ವಿವಿಧ ಮದ್ಯಮಾರಾಟ ಸನ್ನದು ಗಳನ್ನು ದಿನಾಂಕ 29/7/22ರಿಂದ 1/8/22ರ ವರೆಗೆ ಬೆಳಗ್ಗೆ 8ರ ವರೆಗೆ ಮುಚ್ಚಲು ಆದೇಶಿಸಿದ್ದಾರೆ.
ಈ ಆದೇಶವನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಅಬಕಾರಿ ಉಪ ಆಯುಕ್ತರಿಗೆ ನಿರ್ದೇಶನ ನೀಡಿದ್ದಾರೆ.