News Karnataka Kannada
Sunday, April 28 2024
ಮಂಗಳೂರು

ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟದ ಬಗ್ಗೆ ತನಿಖೆ ಮಾಡ್ತಾ ಇದ್ದೇವೆ- ಡಿಜಿಪಿ ಪ್ರವೀಣ್ ಸೂದ್

Mangaluru: DGP Praveen Sood said that an investigation is underway into the cooker bomb blast.
Photo Credit : News Kannada

ಮಂಗಳೂರು: ಮಂಗಳೂರಿನ ನಾಗುರಿಯಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಪೋಟದ ಬಗ್ಗೆ ಡಿಜಿಪಿ ಪ್ರವೀಣ್ ಸೂದ್ ಮಂಗಳೂರು ಕಮಿಷನರ್ ಕಚೇರಿಯಲ್ಲಿ ಹೇಳಿಕೆ ನೀಡಿದ್ದು, ‌ತನಿಖೆ ಮಾಡ್ತಾ ಇದ್ದೇವೆ, ಈಗ ಅದನ್ನು ಹೇಳೋದಕ್ಕೆ ಆಗೋದಿಲ್ಲ. ಸದ್ಯ ಆರೋಪಿಯ ಪ್ರಾಣ ಉಳಿಸಬೇಕು, ಅದು ನಮಗೆ ಅತೀ ಅಗತ್ಯ. ಅವನ ವಿಚಾರಣೆ ಬಳಿಕ ಮತ್ತಷ್ಟು ಸತ್ಯ ಹೊರಗೆ ಬರುತ್ತೆ ಎಂದು ಹೇಳಿದರು.

ತನಿಖೆ ನಡಿತಾ ಇದೆ. ಎನ್.ಐ.ಎ ಮತ್ತು ಕೇಂದ್ರದ ತನಿಖಾ ಸಂಸ್ಥೆಗಳು ನಮ್ಮ ಜೊತೆ ಇದೆ. ಅಧಿಕೃತವಾಗಿ ಸದ್ಯದಲ್ಲೇ ಈ ಪ್ರಕರಣ ಎನ್.ಐ.ಎಗೆ ಹಸ್ತಾಂತರ ಆಗಲಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಲೆಟರ್ ಕೂಡ ಕೊಡಲಾಗಿದೆ ಎಂದರು.

ತಮಿಳುನಾಡು, ಕೇರಳ ಎಲ್ಲಾ ಕಡೆಗಳಲ್ಲೂ ನಮ್ಮ ತನಿಖೆ ನಡಿತಾ ಇದೆ. ನಮ್ಮ ಪೊಲೀಸರು ಕೂಡ ಈ ಬಗ್ಗೆ ವಿಚಾರಣೆ ಮುಂದುವರೆಸಿದ್ದಾರೆ. ನಾವು ಹಲವು ಜನರನ್ನ ವಶಕ್ಕೆ ಪಡೆದಿದ್ದೇವೆ ಹಾಗೆಂದ ಮಾತ್ರಕ್ಕೆ ಅವರೆಲ್ಲರು ಆರೋಪಿಗಳೇ ಆಗಿರಲ್ಲ. ಅವರನ್ನು ‌ನಾವು ಬಂಧಿಸ್ತಾ ಇಲ್ಲ, ವಿಚಾರಣೆಗೆ ಕರೆ ತರ್ತೀವಿ ಅಷ್ಟೇ ಎಂದು ಸ್ಪಷ್ಟನೆ ನೀಡಿದರು.

ಈ ವರೆಗೆ ಬೆಂಗಳೂರು ಸೇರಿ ಎಂಟು ಕಡೆ ದಾಳಿ ನಡೆಸಿ ನಾಲ್ಕು ಜನರನ್ನ ವಶಕ್ಕೆ ಪಡೆದಿದ್ದೇವೆ ಅಷ್ಟೇ. ಆರೋಪಿಗಳು ಅಂತ ಯಾರನ್ನೂ ನಾವು ವಶಕ್ಕೆ ಪಡೆದಿಲ್ಲ. ನಾವು ಎಲ್ಲಾ ರೀತಿಯಿಂದ ತನಿಖೆ ಮಾಡ್ತಾ ಇದೀವಿ. ನಾವು ಒಬ್ಬರನ್ನ ಹಿಡಿಯೋದು ಪ್ರಶ್ನೆ ಅಲ್ಲ, ಈ ಕೃತ್ಯದ ಹಿಂದಿರೋರು ಬೇಕು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು