Categories: ಮಂಗಳೂರು

ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟದ ಬಗ್ಗೆ ತನಿಖೆ ಮಾಡ್ತಾ ಇದ್ದೇವೆ- ಡಿಜಿಪಿ ಪ್ರವೀಣ್ ಸೂದ್

ಮಂಗಳೂರು: ಮಂಗಳೂರಿನ ನಾಗುರಿಯಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಪೋಟದ ಬಗ್ಗೆ ಡಿಜಿಪಿ ಪ್ರವೀಣ್ ಸೂದ್ ಮಂಗಳೂರು ಕಮಿಷನರ್ ಕಚೇರಿಯಲ್ಲಿ ಹೇಳಿಕೆ ನೀಡಿದ್ದು, ‌ತನಿಖೆ ಮಾಡ್ತಾ ಇದ್ದೇವೆ, ಈಗ ಅದನ್ನು ಹೇಳೋದಕ್ಕೆ ಆಗೋದಿಲ್ಲ. ಸದ್ಯ ಆರೋಪಿಯ ಪ್ರಾಣ ಉಳಿಸಬೇಕು, ಅದು ನಮಗೆ ಅತೀ ಅಗತ್ಯ. ಅವನ ವಿಚಾರಣೆ ಬಳಿಕ ಮತ್ತಷ್ಟು ಸತ್ಯ ಹೊರಗೆ ಬರುತ್ತೆ ಎಂದು ಹೇಳಿದರು.

ತನಿಖೆ ನಡಿತಾ ಇದೆ. ಎನ್.ಐ.ಎ ಮತ್ತು ಕೇಂದ್ರದ ತನಿಖಾ ಸಂಸ್ಥೆಗಳು ನಮ್ಮ ಜೊತೆ ಇದೆ. ಅಧಿಕೃತವಾಗಿ ಸದ್ಯದಲ್ಲೇ ಈ ಪ್ರಕರಣ ಎನ್.ಐ.ಎಗೆ ಹಸ್ತಾಂತರ ಆಗಲಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಲೆಟರ್ ಕೂಡ ಕೊಡಲಾಗಿದೆ ಎಂದರು.

ತಮಿಳುನಾಡು, ಕೇರಳ ಎಲ್ಲಾ ಕಡೆಗಳಲ್ಲೂ ನಮ್ಮ ತನಿಖೆ ನಡಿತಾ ಇದೆ. ನಮ್ಮ ಪೊಲೀಸರು ಕೂಡ ಈ ಬಗ್ಗೆ ವಿಚಾರಣೆ ಮುಂದುವರೆಸಿದ್ದಾರೆ. ನಾವು ಹಲವು ಜನರನ್ನ ವಶಕ್ಕೆ ಪಡೆದಿದ್ದೇವೆ ಹಾಗೆಂದ ಮಾತ್ರಕ್ಕೆ ಅವರೆಲ್ಲರು ಆರೋಪಿಗಳೇ ಆಗಿರಲ್ಲ. ಅವರನ್ನು ‌ನಾವು ಬಂಧಿಸ್ತಾ ಇಲ್ಲ, ವಿಚಾರಣೆಗೆ ಕರೆ ತರ್ತೀವಿ ಅಷ್ಟೇ ಎಂದು ಸ್ಪಷ್ಟನೆ ನೀಡಿದರು.

ಈ ವರೆಗೆ ಬೆಂಗಳೂರು ಸೇರಿ ಎಂಟು ಕಡೆ ದಾಳಿ ನಡೆಸಿ ನಾಲ್ಕು ಜನರನ್ನ ವಶಕ್ಕೆ ಪಡೆದಿದ್ದೇವೆ ಅಷ್ಟೇ. ಆರೋಪಿಗಳು ಅಂತ ಯಾರನ್ನೂ ನಾವು ವಶಕ್ಕೆ ಪಡೆದಿಲ್ಲ. ನಾವು ಎಲ್ಲಾ ರೀತಿಯಿಂದ ತನಿಖೆ ಮಾಡ್ತಾ ಇದೀವಿ. ನಾವು ಒಬ್ಬರನ್ನ ಹಿಡಿಯೋದು ಪ್ರಶ್ನೆ ಅಲ್ಲ, ಈ ಕೃತ್ಯದ ಹಿಂದಿರೋರು ಬೇಕು ಎಂದರು.

Gayathri SG

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

3 hours ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

4 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

4 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

5 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

6 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

6 hours ago