ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಜಿಲ್ಲಾ ಕಾರಾಗೃಹದಲ್ಲಿ ಇಂದು ಪೊಲೀಸರು ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ತಪಾಸಣೆ ವೇಳೆ ಬೀಡಿ, ಸಿಗರೇಟು, ತಂಬಾಕು ಮಾತ್ರ ಸಿಕ್ಕಿದೆ ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್.ಜೈನ್ ಹೇಳಿಕೆ ನೀಡಿದ್ದಾರೆ.
ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ರವಿವಾರ ಭಾರೀ ಸಂಖ್ಯೆಯ ಪೊಲೀಸರು ದಿಢೀರ್ ತಪಾಸಣೆ ನಡೆಸಲಾಗಿದೆ. ತಪಾಸಣೆಯ ಅನಂತರ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇದೊಂದು ಮಾಮೂಲಿ ತಪಾಸಣೆ. ಅಧಿಕಾರಿ, ಸಿಬಂದಿ ಸೇರಿದಂತೆ ಸುಮಾರು 300 ಮಂದಿ ಪೊಲೀಸರು ಪಾಲ್ಗೊಂಡಿದ್ದರು. ಮಾದಕ ದ್ರವ್ಯ, ಮೊಬೈಲ್ ಗಳು ಸಿಕ್ಕಿಲ್ಲ. ಸುಮಾರು ಒಂದೂವರೆ ತಾಸು ತಪಾಸಣೆ ನಡೆಸಲಾಗಿದೆ.
ಗಾಂಜಾ ಮತ್ತಿತರ ವಸ್ತುಗಳ ಸಾಗಾಟದ ಬಗ್ಗೆ ಕಾರಾಗೃಹದಲ್ಲಿ ನಿರಂತರವಾಗಿ ಸಮರ್ಪಕವಾಗಿ ನಡೆಯುತ್ತಿದೆ. ಈ ಬಗ್ಗೆ ಕಾರಾಗೃಹ ಅಧೀಕ್ಷಕರೊಂದಿಗೂ ಮಾತನಾಡಿದ್ದೇನೆ. ವಿಚಾರಣಾಧೀನ ಕೈದಿಗಳು ಮೊಬೈಲ್ ಕರೆ ಮಾಡುತ್ತಿದ್ದಾರೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಆ ರೀತಿಯ ಚಟುವಟಿಕೆ ಗೊತ್ತಾಗಿಲ್ಲ ಎಂದು ಆಯುಕ್ತರು ತಿಳಿಸಿದ್ದಾರೆ.