News Karnataka Kannada
Monday, April 29 2024
ಮಂಗಳೂರು

ಮಂಗಳೂರು: ಟೋಲ್ ಹೋರಾಟ, ಬೈಕ್ ರ‍್ಯಾಲಿ ತಡೆದು ಡಿವೈಎಫ್ಐ ಕಾರ್ಯಕರ್ತರ ಬಂಧನ

MANGALURU: DYFI activists arrested for stopping bike rally during toll protest
Photo Credit : News Kannada

ಮಂಗಳೂರು:  ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವುಗೊಳ್ಳುವವರೆಗೆ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಹಗಲು ರಾತ್ರಿ ಧರಣಿಯನ್ನು ಬೆಂಬಲಿಸಿ ಡಿವೈಎಫ್ಐ, ಎಸ್ಎಫ್ಐ ಇಂದು ಉರ್ವಸ್ಟೋರ್ ಜಂಕ್ಷನ್ ನಿಂದ ಸುರತ್ಕಲ್ ಟೋಲ್ ಗೇಟ್ ವರೆಗೆ ಸಂಘಟಿಸಿದ ಬೈಕ್ ರ‍್ಯಾಲಿಯ ಅನುಮತಿಯನ್ನು ನಿರಾಕರಿಸಿದ ಪೊಲೀಸರು ಬೈಕ್ ರ‍್ಯಾಲಿಯನ್ನು ತಡೆದರು.

ಈ ವೇಳೆ ಡಿವೈಎಫ್ಐ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಪೊಲೀಸರ ಅನುಮತಿ ನಿರಾಕರಿಸಿದ ಹಿನ್ನಲೆಯಲ್ಲಿ ಪಾದಯಾತ್ರೆಯ ಮೂಲಕವೇ ಸುರತ್ಕಲ್ ತೆರಳಲು ಮುಂದಾದ ಹೋರಾಟಗಾರರನ್ನು ಉರ್ವ ಠಾಣಾ ಪೊಲೀಸರು ತಡೆದು ಬಂಧಿಸಿದರು.

ಡಿವೈಎಫ್ಐನ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್, ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ನವೀನ್ ಕೊಂಚಾಡಿ ಸಹಿತ ಸುಮಾರು 25ಕ್ಕೂ ಅಧಿಕ ಕಾರ್ಯಕರ್ತರನ್ನು ಉರ್ವ ಪೊಲೀಸರು ಬಂಧಿಸಿ 50ಕ್ಕೂ ಅಧಿಕ ಬೈಕ್ ಗಳನ್ನು ವಶಕ್ಕೆ ಪಡೆದರು. ನಂತರ ಡಿವೈಎಫ್ಐ ಕಾರ್ಯಕರ್ತರನ್ನು ಸ್ಟೇಷನ್ ಜಾಮೀನಿನಡಿ ಬಿಡುಗಡೆಗೊಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು