ಮಂಗಳೂರು: ಕೇಂದ್ರ ಚುನಾವಣಾ ಆಯೋಗವು ದಕ್ಷಿಣ ಕನ್ನಡ ಜಿಲ್ಲೆಗೆ ಚುನಾವಣಾ ವೀಕ್ಷಕರನ್ನು ನಿಯೋಜಿಸಿದೆ. ಈ ಪೈಕಿ ಚುನಾವಣಾ ಖರ್ಚು ವೆಚ್ಚಗಳ ಮೇಲೆ ನಿಗಾ ಇಡಲು ಚುನಾವಣಾ ಖರ್ಚುಗಳ ವೀಕ್ಷಕರು (ಎಕ್ಸೆಂಡಿಚರ್ ಅಬ್ಸರ್ ವರ್) ಜಿಲ್ಲೆಗೆ ಆಗಮಿಸಿದ್ದಾರೆ.
204 ಮಂಗಳೂರು ಹಾಗೂ 205 ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಪ್ರದೀಪ್ ಸಿಂಗ್ ಗೌತಮ್ (ಐಆರ್ ಎಸ್) ಅವರು ಖರ್ಚು ವೆಚ್ಚಗಳ ವೀಕ್ಷಕರಾಗಿ ಆಗಮಿಸಿದ್ದಾರೆ ಅವರ ಮೊಬೈಲ್ ಸಂಖ್ಯೆ: 9141046507 ಆಗಿದೆ. 206 ಪುತ್ತೂರು ಹಾಗೂ 207 ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ವಿವೇಕ್ ನಾಗರಥ್(ಐಆರ್ ಎಸ್) ಅವರನ್ನು ವೆಚ್ಚ ವೀಕ್ಷಕರನ್ನಾಗಿ ನಿಯೋಜಿಸಲಾಗಿದೆ, ಅವರ ಮೊಬೈಲ್ ಸಂಖ್ಯೆ 9141046505 ಆಗಿದೆ.
ಚುನಾವಣಾ ಖರ್ಚುಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಈ ವೆಚ್ಚ ವೀಕ್ಷಕರಿಗೆ ದೂರು, ಅವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಅಪರ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.