ಮಂಗಳೂರು: ಬೈಕಂಪಾಡಿ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ವಿದ್ಯುತ್ ಅವಘಡದಿಂದ 10 ಲಕ್ಷ ರೂ. ನಷ್ಟ ಸಂಭವಿಸಿದೆ.
ಖಾಸಗಿ ಸಂಸ್ಥೆಯೊಂದರಲ್ಲಿ ಭಾನುವಾರ ರಾತ್ರಿ 8ರ ಸುಮಾರಿಗೆ ವಿದ್ಯುತ್ ಮೀಟರ್ ಭಾರೀ ಶಬ್ದದೊಂದಿಗೆ ಸ್ಫೋಟಗೊಂಡು ವಿದ್ಯುತ್ ಬೋರ್ಡ್ನಲ್ಲಿ ಬೆಂಕಿ ಕಾಣಿಸಿಕೊಂಡಿತು. ಸುದ್ದಿ ತಿಳಿದ ಕೂಡಲೇ ಮೆಸ್ಕಾಂನವರು ಪರಿಸರದ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದರು. ಪರಿಸರದಲ್ಲಿದ್ದ ಇತರ ಕೈಗಾರಿಕೆಗಳ ಕಾರ್ಮಿಕರು ಧಾವಿಸಿ ಬಂದು ರಸ್ತೆ ಬದಿಯಲ್ಲಿದ್ದ ಮರಳನ್ನು ಬೆಂಕಿಗೆ ಎರಚುವ ಮೂಲಕ ಬೆಂಕಿಯನ್ನು ನಿಯಂತ್ರಿಸಿದರು ಎಂದು ಕಾರ್ಖಾನೆಯ ಮೂಲಗಳು ತಿಳಿಸಿವೆ.