News Karnataka Kannada
Monday, May 13 2024
ಮಂಗಳೂರು

ಮಂಗಳೂರು: ಪಚ್ಚನಾಡಿ ಡಂಪಿಂಗ್ ಯಾರ್ಡ್ ಗೆ ಮತ್ತೆ ಬೆಂಕಿ – ಕಂಗಾಲಾದ ನಾಗರಿಕರು

Mangaluru: Fire breaks out at Pachanadi dumping yard again
Photo Credit : News Kannada

ಮಂಗಳೂರು: ನಗರದ ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಇತ್ತೀಚೆಗೆ ಕಾಣಿಸಿಕೊಂಡ ಬೆಂಕಿ ಒಂಬತ್ತು ದಿನಗಳಾದರೂ ತಣಿಯದ ಪರಿಣಾಮ ಹೊಗೆಯಿಂದ ಸುತ್ತಮುತ್ತಲಿನ ನಿವಾಸಿಗಳು ದಮ್ಮು, ಕೆಮ್ಮಿನಿಂದ ಬಳಲಿ ಈಗಷ್ಟೇ ಸಹಜ ಸ್ಥಿತಿಗೆ ಮರಳಿದ್ದರು. ಇದೀಗ ಮತ್ತೆ ತ್ಯಾಜ್ಯ ರಾಶಿಯಲ್ಲಿ ಬೆಂಕಿ ಕಾಣಿಸಿಕೊಂಡು ಆಕಾಶದೆತ್ತರಕ್ಕೆ ಹೊಗೆ ಏಳಲಾರಂಭಿಸಿದ್ದು, ನಾಗರಿಕರು ಕಂಗಾಲಾಗಿದ್ದಾರೆ.

ಪದೇ ಪದೇ ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಬೆಂಕಿ ಕಾಣಲಾರಂಭಿಸುತ್ತಿದ್ದು, ಇದೀಗ ಮತ್ತೆ ಅಗ್ನಿ ಅವಘಡ ಸಂಭವಿಸಿದೆ. ಜ.6ರಂದು ಡಂಪಿಂಗ್ ಯಾರ್ಡ್ ಗೆ ಬಿದ್ದ ಬೆಂಕಿಯ ಹೊಗೆಗೆ ಪಚ್ಚನಾಡಿ, ಮಂಗಳನಗರ, ಮಂದಾರ ಪ್ರದೇಶದ ನಿವಾಸಿಗಳು ಅಕ್ಷರಶಃ ನಲುಗಿದ್ದರು. ನಿನ್ನೆ ಅದರ ಎದುರು ಭಾಗದ ತ್ಯಾಜ್ಯ ರಾಶಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆದರೆ ತಕ್ಷಣ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿತ್ತು. ಇಂದು ಮತ್ತೆ ಕಾಣಿಸಿಕೊಂಡ ಬೆಂಕಿಯ ಕೆನ್ನಾಲಿಗೆ ಸಂಪೂರ್ಣ ತ್ಯಾಜ್ಯ ರಾಶಿಯನ್ನು ಆವರಿಸಿದೆ. ಪರಿಣಾಮ ಹೊಗೆ ಆಕಾಶದೆತ್ತರಕ್ಕೆ ದಟ್ಟವಾಗಿ ಎದ್ದು, ಸಂಪೂರ್ಣ ಪರಿಸರವನ್ನು ವ್ಯಾಪಿಸಿದೆ.

ಸ್ಥಳದಲ್ಲಿ 3-4 ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದೆ. ಅಲ್ಲದೆ ಜೆಸಿಬಿ ಮೂಲಕವೂ ಬೆಂಕಿ ನಂದಿಸುವ ಕಾರ್ಯ ಮುಂದುವರಿದಿದೆ. ಸ್ಥಳದಲ್ಲಿ ಮಂಗಳೂರು ಮನಪಾ ಆಯುಕ್ತ ಅಕ್ಷಯ್ ಶ್ರೀಧರ್ ಹಾಗೂ ಆರೋಗ್ಯಾಧಿಕಾರಿ ಬೀಡು ಬಿಟ್ಟಿದ್ದಾರೆ. ತ್ಯಾಜ್ಯ ರಾಶಿಗೆ ಪದೇ ಪದೇ ಬೆಂಕಿ ಬೀಳುವ ಬಗ್ಗೆ ನಾಗರಿಕರು ಮಂಗಳೂರು ಮನಪಾ, ಸ್ಥಳೀಯ ಶಾಸಕರು, ಕಾರ್ಪೊರೇಟರ್ ವಿರುದ್ಧ ಕಿಡಿಕಾರಿದ್ದರು. ಆದರೆ ಇದೀಗ ಮತ್ತೆ ಬೆಂಕಿ ಕಾಣಿಸಿಕೊಂಡಿದ್ದರಿಂದ ನಾಗರಿಕರು ಜಿಲ್ಲಾಡಳಿತದ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು