ಮಂಗಳೂರು: ನ.07 ರಂದು ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿಗಳಾದ ಶ್ರೀ ರವಿ ಕುಮಾರ್ ಎಂ ಆರ್ ರವರನ್ನು ಮತ್ತು ಮಾನ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಡಾ.ಕುಮಾರ್ ರವರನ್ನು ಭೇಟಿ ಮಾಡಿ ಧ್ವಜ ಚೀಟಿಯನ್ನು ಬಿಡುಗಡೆ ಮಾಡಲಾಯಿತು.
ನ.07 ರಂದು ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿಗಳಾದ ಶ್ರೀ ರವಿ ಕುಮಾರ್ ಎಂ ಆರ್ ರವರನ್ನು ಭೇಟಿ ಮಾಡಿ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಕಾರ್ಫ್ ತೊಡಿಸಿ,ಧ್ವಜ ಚೀಟಿಯನ್ನು ಬಿಡುಗಡೆ ಮಾಡಲಾಯಿತು. ಈ ಸಂಧರ್ಭದಲ್ಲಿ ಮಾಜಿ ಸಚಿವರು ಹಾಗೂ ಜಿಲ್ಲಾ ಸಹಾಯಕ ಆಯುಕ್ತರು ಶ್ರೀ ನಾಗರಾಜ್ ಶೆಟ್ಟಿ,ಜಿಲ್ಲಾ ಗೈಡ್ ಆಯುಕ್ತೆ (ಪ್ರಭಾರ) ಶ್ರೀಮತಿ ಜಯವಂತಿ ಸೋನ್ಸ್, ಜಿಲ್ಲಾ ಕಾರ್ಯದರ್ಶಿ ಶ್ರೀ ಎಂ ಜಿ ಕಜೆ,ರಾಜ್ಯ ಸಹಾಯಕ ಸಂಘಟನಾ ಆಯುಕ್ತರು ಶ್ರೀ ಭರತ್ ರಾಜ್ ಕೆ ಉಪಸ್ಥಿತರಿದ್ದರು.
ನ.07 ರಂದು ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಮಾನ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಡಾ.ಕುಮಾರ್ ರವರನ್ನು ಭೇಟಿ ಮಾಡಿ,ಧ್ವಜ ಚೀಟಿಯನ್ನು ಬಿಡುಗಡೆ ಮಾಡಲಾಯಿತು. ಈ ಸಂಧರ್ಭದಲ್ಲಿ ಮಾಜಿ ಸಚಿವರು ಹಾಗೂ ಜಿಲ್ಲಾ ಸಹಾಯಕ ಆಯುಕ್ತರು ಶ್ರೀ ನಾಗರಾಜ್ ಶೆಟ್ಟಿ,ರಾಜ್ಯ ಸಹಾಯಕ ಸಂಘಟನಾ ಆಯುಕ್ತರು ಶ್ರೀ ಭರತ್ ರಾಜ್ ಕೆ ಉಪಸ್ಥಿತರಿದ್ದರು.