ಮಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನನ್ನನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಿದೆ ಎಂದು ಮಾಜಿ ಶಾಸಕ ಮೊಹಿಯುದ್ದೀನ್ ಬಾವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು ಮಂಗಳೂರು ಉತ್ತರ ಕ್ಷೇತ್ರಕ್ಕೆ ನನ್ನ ಹೆಸರನ್ನು ಪಕ್ಷ ಘೋಷಣೆ ಮಾಡುವುದು ಶತಸಿದ್ಧ ಎಂದರು.
ನಾನು ಈಗ ಶಾಸಕನಲ್ಲದಿದ್ದರೂ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಮಂಜೂರು ಮಾಡುವಂತೆ’ ಎಂಎಲ್ಸಿ, ಬಿ.ಎಂ. ಫಾರೂಕ್ ಅವರಿಗೆ ಮನವಿ ಮಾಡಿದೆ, ಎಂಎಲ್ ಸಿ ಫಾರೂಕ್ ಅವರು 1.60 ಕೋಟಿ ರೂ. ಅನುದಾನ ಮಂಜೂರು ಮಾಡಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ್ದಾರೆ. ನಾನು ಶಾಸಕನಾಗಿದ್ದಾಗ ಕ್ಷೇತ್ರದ ಅಭಿವೃದ್ಧಿಗೆ ಕೋಟಿಗಟ್ಟಲೆ ಅನುದಾನ ಒದಗಿಸುವ ಕೆಲಸ ಮಾಡಿದ್ದೇ ಆದರೆ ನನ್ನ ಮೇಲೆ ಸುಳ್ಳು ಆರೋಪ ಹೊರೆಸುವ ಕೆಲಸ ಮಾಡಿ ಜನರನ್ನು ದಿಕ್ಕು ತಪ್ಪಿಸುವ ವ್ಯವಸ್ಥಿತ ಷಡ್ಯಂತ್ರ ನಡೆದಿದೆ ಎಂದರು.