ಮಂಗಳೂರು: ಹೊರಗುತ್ತಿಗೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಫಾಯಿ ಕರ್ಮಚಾರಿಗಳ ಪ್ರತಿಭಟನೆ 12ನೇ ದಿನಕ್ಕೆ ಮುಂದುವರಿದಿದ್ದು ಮಂಗಳೂರು ನಗರದಲ್ಲಿ ಕಸ ವಿಲೇವಾರಿ ಸಮಸ್ಯೆ ಬಹಳಷ್ಟು ಬಿಗಡಾಯಿಸಿತು. ಮುಷ್ಕರದಿಂದಾಗಿ ತ್ಯಾಜ್ಯ ವಿಲೇವಾರಿ ಸಮಸ್ಯೆ ಮಾತ್ರವಲ್ಲದೆ ಒಳಚರಂಡಿ ವ್ಯವಸ್ಥೆಯಲ್ಲಿ ಸಾಕಷ್ಟು ಸಮಸ್ಯೆ ಸೃಷ್ಟಿಯಾಗಿದೆ.
ಪಾಲಿಕೆ ಅಧಿಕಾರಿಗಳು ಸಹ ಪರ್ಯಾಯ ದಾರಿ ಕಾಣದೆ ಕಂಗಾಲಾಗಿ ಹೋಗಿದ್ದಾರೆ. ಈ ಎಲ್ಲ ಸಮಸ್ಯೆಗಳಿಗೆ ರೋಸಿ ಹೋಗಿ ಸಾಮಾಜಿಕ ಕಾರ್ಯಕರ್ತ ಶ್ರೀನಿವಾಸ್ ನಂದಗೋಪಾಲ್ ಮಹಾನಗರ ಪಾಲಿಕೆ ಮುಂಭಾಗದಲ್ಲಿ ಮನೆಯಿಂದ ತಂದ ಕಸ ಇಟ್ಟು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.