ಮಂಗಳೂರು: ದ.ಕ ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ವಿವೇಕಾನಂದ (56) ಅವರು ಗುರುವಾರ ಬೆಳಗ್ಗೆ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಿವೇಕಾನಂದ ಅವರು ವಾಸ್ತವ್ಯವಿದ್ದ ಬಿಜೈಯ ವಸತಿ ಸಂಕೀರ್ಣದ ಮಹಡಿಯಿಂದ ನೆಲಕ್ಕೆ ಹಾರಿದ್ದರು. ಗಂಭೀರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಚುನಾವಣಾ ಕರ್ತವ್ಯ ನಡೆಸಿದ್ದ ಅವರು ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬುದು ಗೊತ್ತಾಗಿಲ್ಲ. ಡೆತ್ನೋಟ್ ಪತ್ತೆಯಾಗಿಲ್ಲ. ಕೆಲವು ದಿನಗಳಿಂದ ಒತ್ತಡದಲ್ಲಿದ್ದರು ಎನ್ನಲಾಗಿದೆ. ಮೂಲತಃ ಸಾಗರದವರಾದ ಅವರು ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಬಿಜೈಯಲ್ಲಿ ವಾಸವಿದ್ದರು. ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಛತ್ತೀಸ್ಗಢದ ಬೆಮೆತಾರಾದ ಕಥಿಯಾ ಪೆಟ್ರೋಲ್ ಪಂಪ್ ಬಳಿ ಪಿಕಪ್ ಟ್ರಕ್ ರಸ್ತೆ ಬದಿ ನಿಲ್ಲಿಸಿದ್ದ ಟಾಟಾ 407 ವಾಹನಕ್ಕೆ ಡಿಕ್ಕಿ…
ತಮಿಳುನಾಡಿನ ಚೆನ್ನೈನ ಅವಡಿಯ ತಿರುಮಲ್ಲೈವೋವಲ್ನಲ್ಲಿರುವ ಅಪಾರ್ಟ್ಮೆಂಟ್ನ ಕಿಟಕಿಯಿಂದ ಏಳು ತಿಂಗಳ ಮಗುವೊಂದು ವಿಂಡೋ ಪೋರ್ಚ್ ಮೇಲೆ ಬಿದ್ದ ಘಟನೆ ನಡೆದಿದೆ.
ಜಮ್ಮು ಮತ್ತು ಕಾಶ್ಮೀರದ ಸೋನಾಮಾರ್ಗ್ನಲ್ಲಿ ಒಂಭತ್ತು ಜನ ಪ್ರಯಾಣ ಮಾಡುತ್ತಿದ್ದ ಟವೇರಾ ಎಸ್ಯುವಿ ಕಾರ್ ನಿಯಂತ್ರಣ ತಪ್ಪಿ ಸಿಂಧ್ ನದಿಗೆ…
ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯ ಸಫಿಪುರದಲ್ಲಿ ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ನಡೆದಿದೆ.
ಹುಬ್ಬಳ್ಳಿಯಲ್ಲಿ ಅನ್ಯಕೋಮಿನ ಯುವಕನೊಬ್ಬ ಅಪ್ರಾಪ್ತ ಬಾಲಕಿಯನ್ನು ಫುಸಲಾಯಿಸಿ ಬಾಗಲಕೋಟೆ ಜಿಲ್ಲೆಯಿಂದ ಹುಬ್ಬಳ್ಳಿಗೆ ಕರೆದುಕೊಂಡ ಬಂದಿದ್ದಾನೆ.
2024-25ನೇ ಸಾಲಿಗೆ ನಡೆದ ಜಿಲ್ಲಾ ವಕೀಲರ ಸಂಘದ ಚುನಾವಣೆಯಲ್ಲಿ ಶಿವಶರಣಪ್ಪ ಪಾಟೀಲ ಗೆದ್ದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.