Categories: ಮಂಗಳೂರು

ಮಂಗಳೂರು: ಗಗನಕ್ಕೇರಿದ ಗಲ್ಫ್‌ ವಿಮಾನ ಪ್ರಯಾಣ ದರ, ದಮಾಮ್‌ನಿಂದ ಮಂಗಳೂರಿಗೆ ₹50 ಸಾವಿರಕ್ಕೇರಿದ ದರ

ಮಂಗಳೂರು: ಕಳೆದ ಒಂದು ತಿಂಗಳಿನಿಂದ ಮಂಗಳೂರಿನಿಂದ ಕೊಲ್ಲಿ ರಾಷ್ಟ್ರಗಳಿಗೆ ವಿಮಾನ ಪ್ರಯಾಣ ದರ ದುಬಾರಿಯಾಗಿದ್ದು, ಜುಲೈ ತಿಂಗಳ ಅಂತ್ಯದವರೆಗೂ ದರ ಇದೇ ರೀತಿಯಲ್ಲಿ ಮುಂದುವರಿಯಲಿದೆ ಎಂದು ಟ್ರಾವೆಲ್‌ ಏಜೆನ್ಸಿಗಳು ಹೇಳಿವೆ.

ದಮಾಮ್‌ನಿಂದ ಮಂಗಳೂರಿಗೆ ತಡೆರಹಿತ ವಿಮಾನ ಯಾನದ ದರವು 50 ಸಾವಿರ ರೂ.ಗೆ ತಲುಪಿದ್ದು, ಇದು ಇತರೆಲ್ಲ ರಾಷ್ಟ್ರಗಳ ಪ್ರಯಾಣಕ್ಕಿಂತಲೂ ದುಬಾರಿಯಾಗಿದೆ. ಗಲ್ಫ್‌ ರಾಷ್ಟ್ರಗಳಿಗೆ ಮಂಗಳೂರಿನಿಂದ ಸಂಚರಿಸುವ ಬಹುತೇಕ ಎಲ್ಲ ವಿಮಾನಗಳು ಫುಲ್‌ ಬುಕ್ಕಿಂಗ್‌ ಕಾಣುತ್ತಿದ್ದು, ಭಾರೀ ಡಿಮ್ಯಾಂಡ್‌ ಇರುವ ಕಾರಣದಿಂದ ವಿಮಾನ ದರದಲ್ಲಿ ವಿಪರೀತ ಏರಿಕೆ ಕಂಡು ಬಂದಿದೆ ಎಂದು ವಿಮಾನಯಾನಗಳ ಮೂಲಗಳು ತಿಳಿಸಿವೆ.

ಕೋವಿಡ್‌ ಸಾಂಕ್ರಾಮಿಕ ನಂತರದ ದಿನಗಳಲ್ಲಿ ದ್ವಿಮುಖ ಸಂಚಾರದ ಟಿಕೆಟ್‌ ದರ 25 ಸಾವಿರ ರೂ.ಗಿಂತ ಕಡಿಮೆಯಿತ್ತು. ಈಗ ಅದೇ ದರ 35 ಸಾವಿರದಿಂದ 40 ಸಾವಿರಕ್ಕೆ ತಲುಪಿದೆ. ಬಹರೈನ್‌ನಿಂದ ಮಂಗಳೂರಿಗೆ ವಿಮಾನ ಪ್ರಯಾಣ ದರ 50 ಸಾವಿರ ದಾಟಿದೆ. ಸಾಮಾನ್ಯ ದಿನಗಳಲ್ಲಿ ಈ ಮಾರ್ಗದಲ್ಲಿ ದ್ವಿಮುಖ ಸಂಚಾರ 40 ಸಾವಿರ ರೂ. ಒಳಗೆ ಲಭ್ಯವಿರುತ್ತದೆ ಎಂದು ಮೂಲಗಳು ತಿಳಿಸಿವೆ.

ಕೋವಿಡ್‌ ಬಳಿಕ ಗಲ್ಫ್‌ ರಾಷ್ಟ್ರಗಳಲ್ಲಿ ಸಹಜ ಸ್ಥಿತಿ ಇರುವ ಕಾರಣ ಎಲ್ಲ ವಿಮಾನ ಸಂಚಾರಗಳು ಯಥಾಸ್ಥಿತಿಯಲ್ಲಿ ಸಂಚರಿಸುತ್ತಿವೆ. ಈ ಕಾರಣ ಗಲ್ಫ್‌ ವಿಮಾನ ಯಾನಕ್ಕೆ ಅತಿ ಹೆಚ್ಚಿನ ಬೇಡಿಕೆ ವ್ಯಕ್ತವಾಗಿದೆ. ಇದಲ್ಲದೆ ಸದ್ಯ ಗಲ್ಫ್‌ ರಾಷ್ಟ್ರಗಳಲ್ಲಿ ರಜೆ ಇರುವ ಕಾರಣದಿಂದ ಬಹುತೇಕರು ಅಲ್ಲಿಂದ ಸ್ವದೇಶಕ್ಕೆ ಬಂದು ಮರಳಿ ಹೋಗಲು ಟಿಕೆಟ್‌ ಬುಕ್‌ ಮಾಡುತ್ತಿದ್ದಾರೆ. ಈ ಕಾರಣದಿಂದ ಸಹಜವಾಗಿಯೇ ಟಿಕೆಟ್‌ ದರದಲ್ಲಿ ಭಾರಿ ಏರಿಕೆಯಾಗಿದೆ. ಜುಲೈ ಬಳಿಕ ಟಿಕೆಟ್‌ ದರದಲ್ಲಿ ಸಹಜ ಸ್ಥಿತಿಗೆ ಬರಲಿದೆ ಎಂದು ಟ್ರಾವೆಲ್ಸ್‌ ಏಜೆನ್ಸಿಯೊಂದರ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

Ashika S

Recent Posts

ʼಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಕರಾಳ ದಿನಗಳನ್ನ ಎದುರಿಸಬೇಕಾಗುತ್ತದೆʼ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಮುಂದಿನ ದಿನಗಳಲ್ಲಿ ದೇಶವು ಕರಾಳ ದಿನಗಳನ್ನು ನೋಡಬೇಕಾಗಬಹುದು ಎಂದು ಶಿವಸೇನಾ…

5 mins ago

ವಕೀಲ ಬಾಬಶೆಟ್ಟಿ ಹತ್ಯೆಗೆ 5 ಲಕ್ಷ ಸುಪಾರಿ: ಪ್ರಮುಖ ಆರೋಪಿ ಬಂಧನ

ಐದು ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು, ವಕೀಲನ ಹತ್ಯೆಗೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಬೀದರ್‌ ಜಿಲ್ಲಾ ಪೊಲೀಸರು…

17 mins ago

ದೇಶಾದ್ಯಂತ 24 ಗಂಟೆ ವಿದ್ಯುತ್‌ ಪೂರೈಕೆ ಸೇರಿ 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

2024ರ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ ಹತ್ತು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌…

23 mins ago

ಬೀದರ್‌: ಬಿಸಿ ದೋಸೆಯಂತೆ ಮಾರಾಟವಾಗುತ್ತಿದೆ ಎಸಿ, ಕೂಲರ್‌

ಬಿಸಿಲು ಹಾಗೂ ಅದರ ಝಳದಿಂದ ಜನ ಒಂದೆಡೆ ತೀವ್ರ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿದ್ದರೆ, ಏರ್‌ ಕಂಡಿಷನರ್‌ (ಎಸಿ), ಏರ್‌ ಕೂಲರ್‌ಗಳ…

37 mins ago

ಪರಿಷತ್ ಚುನಾವಣೆಯಲ್ಲೂ ಜೆಡಿಎಸ್ ಜತೆ ಮೈತ್ರಿ ಮುಂದುವರಿಕೆ: ಬಿ.ಎಸ್.ಯಡಿಯೂರಪ್ಪ

ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿಮೈತ್ರಿ ಮುಂದುವರಿಯಲಿದ್ದು, ಮೈತ್ರಿಗೆ ಯಾವುದೇ ಭಂಗ ಆಗುವುದಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ…

54 mins ago

ವೇಣುಗೋಪಾಲಸ್ವಾಮಿ ದೇಗುಲ ಬಳಿ ಅಡ್ಡಾಡುತ್ತಿರುವ ಒಂಟಿ ಗಜ

ಪ್ರತಿಷ್ಠಿತ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ವೇಣುಗೋಪಾಲಸ್ವಾಮಿ ಬೆಟ್ಟದ ದೇಗುಲ ಆವರಣದ ಬಳಿ ಎಂದಿನಂತೆ ಆಗಮಿಸಿದ ಒಂಟಿ ಆನೆ ವಾಪಾಸ್…

1 hour ago