Categories: ಮಂಗಳೂರು

ಮಂಗಳೂರು: ಬಾವುಟದ ಗೌರವ ಕಾಪಾಡುವಂತೆ ಹರ್ ಘರ್ ತಿರಂಗಾ ಕಾರ್ಯಕ್ರಮಗಳು ನಡೆಯಬೇಕು

ಮಂಗಳೂರು: 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬುಧವಾರ ಆಗಸ್ಟ್ 10ರಂದು, ಪಾಂಡೇಶ್ವರದ ನೆಹರೂ ಪ್ರತಿಮೆಯಿಂದ ಗಡಿಯಾರ ಗೋಪುರ, ಪಿವಿಎಸ್ ನಲ್ಲಿರುವ ಗಾಂಧೀಜಿ ಪ್ರತಿಮೆವರೆಗೆ ಪಕ್ಷಾತೀತವಾಗಿ ಸ್ವಾತಂತ್ರ್ಯ ನಡಿಗೆ ಹಮ್ಮಿಕೊಳ್ಳುವುದಾಗಿ ಮಾಜಿ ಶಾಸಕ ಜೆ. ಆರ್. ಲೋಬೋ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೆಹರೂ ಮತ್ತು ಗಾಂಧೀಜಿ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಅವರ ಸ್ವಾತಂತ್ರ್ಯ ಹೋರಾಟ, ಅವರೊಂದಿಗೆ ಕಾಂಗ್ರೆಸ್ ಸ್ವಾತಂತ್ರ್ಯ ಹೋರಾಟಗಾರರ ಬಲಿದಾನವನ್ನು ನೆನಪಿಸಿ ಈ ನಡಿಗೆ ಹಮ್ಮಿಕೊಳ್ಳಲಾಗಿದೆ. ನೆಹರುರವರು ಒಂಬತ್ತು ಬಾರಿ ಜೈಲಿಗೆ ಹೋಗಿದ್ದರು. ಶಾಸ್ತ್ರಿ, ಪಟೇಲ್, ಜಗಜೀವನರಾಂ, ಮನಮೋಹನ್ ಸಿಂಗ್ ಎಲ್ಲರ ಹೋರಾಟವನ್ನೂ ಸ್ಮರಿಸಲಾಗುವುದು ಎಂದರು.

ಹರ್ ಘರ್ ತಿರಂಗಾ ಯೋಜನೆ ಸಂತೋಷ. ಆದರೆ ಬಾವುಟದ ಗೌರವ ಕಾಪಾಡುವಂತೆ ಈ ಕಾರ್ಯಕ್ರಮಗಳು ನಡೆಯಬೇಕು. ರಾಷ್ಟ್ರ ಧ್ವಜಕ್ಕೆ ಯಾವ ರೀತಿಯ ಅವಮಾನವೂ ಆಗಬಾರದು. ಬಾವುಟದ ಅಳತೆ, ಬಣ್ಣ ಎಲ್ಲದಕ್ಕೂ ಅರ್ಥ, ಗೌರವ ಇದೆ. ಕಾಂಗ್ರೆಸ್ ಅದನ್ನು ಕಾಪಾಡಿದೆ. ಈಗಿನ ಸರಕಾರವೂ ಸಹಕರಿಸಬೇಕು ಎಂದೂ ಲೋಬೋ ಹೇಳಿದರು.

ಈ ಸರಕಾರವು ನಿರಂಕುಶದತ್ತ ಸಾಗಿದೆ. ಆದರೆ ರಾಷ್ಟ್ರ ಭಕ್ತಿಯಲ್ಲಾದರೂ ಸಾಚಾ ಆಗಿ ನಡೆದುಕೊಳ್ಳಲಿ ಎಂದು ತಿರುಗೇಟು ನೀಡಿದರು.

Gayathri SG

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

59 mins ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

1 hour ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

2 hours ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

2 hours ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

2 hours ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

3 hours ago