ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಉದ್ದೇಶಿತ ಕೇಂದ್ರ ಮಾರುಕಟ್ಟೆಯಲ್ಲಿ ಒಂಭತ್ತು ಬೀಫ್ ಸ್ಟಾಲ್ ಗಳಿಗೆ ಅವಕಾಶ ಒದಗಿಸಿ ನಕಾಶೆ ಸಿದ್ಧಪಡಿಸಿರುವುದಕ್ಕೆ ಹಿಂದೂ ಸಂಘಟನೆಗಳು ತೀವ್ರ ಖಂಡನೆ ವ್ಯಕ್ತಪಡಿಸಿವೆ.
ಪ್ರಸ್ತಾವಿತ ಮಾರುಕಟ್ಟೆ ಸಂಕೀರ್ಣದಲ್ಲಿ ಬೀಫ್ ಸ್ಟಾಲ್ ಗಳಿಗೆ ಅವಕಾಶ ನೀಡುವುದನ್ನು ವಿರೋಧಿಸಿ ಹಿಂದೂ ಜಾಗರಣ ವೇದಿಕೆಯ ಮಂಗಳೂರು ಘಟಕ ವತಿಯಿಂದ ಮಂಗಳೂರು ಮಹಾನಗರ ಪಾಲಿಕೆಯ ಎದುರು ಪ್ರತಿಭಟನೆ ನಡೆಸಲಾಯಿತು.
ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಪಾಲಿಕೆ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಜಾಗರಣ ವೇದಿಕೆ ಮುಖಂಡ ಕಿಶೋರ್ ಭಟ್ ಈ ಕುರಿತಂತೆ ಮಾತನಾಡಿ ಇದು ಹಿಂದೂ ಸಮಾಜಕ್ಕೆ ಮಾಡಲಾದ ವಂಚನೆ ಎಂದರು.