News Karnataka Kannada
Sunday, April 28 2024
ಮಂಗಳೂರು

ಮಂಗಳೂರು: ನೂರಾರು ಮಂಗಳಮುಖಿ ಸದಸ್ಯೆಯರು ಜನತಾದಳ ಪಕ್ಷಕ್ಕೆ ಸೇರ್ಪಡೆ

Mangaluru: Hundreds of transgender members join Janata Dal
Photo Credit : R Bhat

ಮಂಗಳೂರು: ಇಲ್ಲಿನ ಸುಮಾ ಸಧನ ಮಲ್ಲಿಕಟ್ಟೆಯ ಸಭಾಂಗಣದಲ್ಲಿ ಮಂಗಳೂರಿನಾದ್ಯಂತ ನೂರಾರು ಮಂಗಳಮುಖಿಯರು ಜೆಡಿಎಸ್ ನಾಯಕಿ ಡಾ.‌ಸುಮತಿ ಎಸ್ ಹೆಗ್ಡೆಯವರ ಸಮ್ಮುಖದಲ್ಲಿ ನಿಷಾ ಅವರ ನಾಯಕತ್ವದಲ್ಲಿ ಪಕ್ಷ ಸೇರ್ಪಡೆಗೊಂಡರು.

ಈ ಸಂಧರ್ಭ ಜೆಡಿಎಸ್ ಪಕ್ಷದ ನಾಯಕಿಯರಾದ ಭಾರತೀ ಪುಷ್ಪರಾಜನ್, ಕವಿತಾ, ಆಶಾ ಸುಜ್ನೇಷ್, ಶಾರದಾ ಶೆಟ್ಟೆ, ಸುನೀತಾ, ಜೆಡಿಎಸ್ ಮಂಗಳೂರು ದಕ್ಷಿಣ ಪಧಾಧಿಕಾರಿಗಳಾದ ಅಲ್ತಾಫ್ ತುಂಬೆ , ಸಲೀಂ ಜಾವೇದ್, ದಿನೇಶ್ ಪಯಿಸ್, ಜಯರಾಂ, ಮನೋಜ್ ಕುಮಾರ್ ಹಾಗೂ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.

ಈ ಸಂಧರ್ಭ ಕೆಳವು ಸದಸ್ಯೆಯರು ತಮ್ಮ ಅನುಭವವನ್ನು ಹಂಚುತ್ತಾ ಡಾ. ಸುಮತಿ ಎಸ್ ಹೆಗ್ಡೆಯವರ ಆತ್ಮೀಯತೆ , ಸ್ನೇಹ, ಹಾಗೂ ಸೇವೆಯ ಬಗ್ಗೆ ಪ್ರಸ್ತಾಪಿಸಿ ಇಂತಹ ವೇದಿಕೆ ನೀಡಿದ ಬಗ್ಗೆಯೂ ಮುಕ್ತಕಂಠದಿಂದ ಶ್ಲಾಘಿಸಿದರು.

ಜೆಡಿಎಸ್ ಪಕ್ಷದ ಪಂಚರತ್ನ ಯೋಜನೆಯ ಬಗ್ಗೆ ಪ್ರಸ್ತಾಪಿಸಿದ ಮಂಗಳಮುಖಿ ಸದಸ್ಯೆಯರು, ಡಾ.‌ಸುಮತಿ‌ ಎಸ್ ಹೆಗ್ಡೆ ಗೆದ್ದು ಬಂದಲ್ಲಿ ತಮಗೆ ಶಾಶ್ವತ ನಿವೇಶನ ನೀಡುವ ಬಗ್ಗೆ ಅವಹಾಲು ಸಲ್ಲಿಸಿರುವ ವಿಚಾರಕ್ಕೆ ಸಕಾರಾತ್ಮಕವಾಗಿ ಸ್ಪಂಧಿಸಿದ ಜೆಡಿಎಸ್ ಪಕ್ಷದ ಅಭ್ಯರ್ಥಿಯ ಬಗ್ಗೆ ಮೆಚ್ಷುಗೆಯ‌ನ್ನು ವ್ಯಕ್ತಪಡಿಸಿ, ಪಕ್ಷದ ಪರವಾಗಿ ಕೆಳಸ ಮಾಡುವುದಾಗಿಯೂ ವಿವರಿಸಿದರು.

ಕಳೆದ ಬಾರಿ ಬಿಜೆಪಿಗೆ ಮತನೀಡಿ, ಗೆದ್ದ ನಂತರ ಕಡೆಗಣಿಸಿದ ಶಾಸಕನ ಬಗ್ಗೆ ಆಕ್ರೋಶಗೊಂಡು, ಬಹಳ ಭಾವುಕರಾಗಿ ನುಡಿದರು.‌

ಪಕ್ಷದ ತತ್ವ ಸಿಧ್ದಾಂತವನ್ನು ಒಪ್ಪಿಕೊಂಡು ಬಂದ ಕಾರ್ಯಕರ್ತೆಯರಿಗೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಜೆಡಿಎಸ್ ಅಭ್ಯರ್ಥಿ ಡಾ.‌ಸುಮತಿ ಎಸ್ ಹೆಗ್ಡೆ ಪಕ್ಷದ ಧ್ವಜ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು. ಪ್ರಿಯಾ ಸಾಲಿಯಾನ್ ಕಾರ್ಯಕ್ರಮ ನಿರೂಪಿಸಿದರು. ವಿನ್ಸೆಂಟ್ ಪೆರೇರಾ ಧನ್ಯವಾದಗೈದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
186

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು