ಮಂಗಳೂರು: ಇಲ್ಲಿನ ಸುಮಾ ಸಧನ ಮಲ್ಲಿಕಟ್ಟೆಯ ಸಭಾಂಗಣದಲ್ಲಿ ಮಂಗಳೂರಿನಾದ್ಯಂತ ನೂರಾರು ಮಂಗಳಮುಖಿಯರು ಜೆಡಿಎಸ್ ನಾಯಕಿ ಡಾ.ಸುಮತಿ ಎಸ್ ಹೆಗ್ಡೆಯವರ ಸಮ್ಮುಖದಲ್ಲಿ ನಿಷಾ ಅವರ ನಾಯಕತ್ವದಲ್ಲಿ ಪಕ್ಷ ಸೇರ್ಪಡೆಗೊಂಡರು.
ಈ ಸಂಧರ್ಭ ಜೆಡಿಎಸ್ ಪಕ್ಷದ ನಾಯಕಿಯರಾದ ಭಾರತೀ ಪುಷ್ಪರಾಜನ್, ಕವಿತಾ, ಆಶಾ ಸುಜ್ನೇಷ್, ಶಾರದಾ ಶೆಟ್ಟೆ, ಸುನೀತಾ, ಜೆಡಿಎಸ್ ಮಂಗಳೂರು ದಕ್ಷಿಣ ಪಧಾಧಿಕಾರಿಗಳಾದ ಅಲ್ತಾಫ್ ತುಂಬೆ , ಸಲೀಂ ಜಾವೇದ್, ದಿನೇಶ್ ಪಯಿಸ್, ಜಯರಾಂ, ಮನೋಜ್ ಕುಮಾರ್ ಹಾಗೂ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.
ಈ ಸಂಧರ್ಭ ಕೆಳವು ಸದಸ್ಯೆಯರು ತಮ್ಮ ಅನುಭವವನ್ನು ಹಂಚುತ್ತಾ ಡಾ. ಸುಮತಿ ಎಸ್ ಹೆಗ್ಡೆಯವರ ಆತ್ಮೀಯತೆ , ಸ್ನೇಹ, ಹಾಗೂ ಸೇವೆಯ ಬಗ್ಗೆ ಪ್ರಸ್ತಾಪಿಸಿ ಇಂತಹ ವೇದಿಕೆ ನೀಡಿದ ಬಗ್ಗೆಯೂ ಮುಕ್ತಕಂಠದಿಂದ ಶ್ಲಾಘಿಸಿದರು.
ಜೆಡಿಎಸ್ ಪಕ್ಷದ ಪಂಚರತ್ನ ಯೋಜನೆಯ ಬಗ್ಗೆ ಪ್ರಸ್ತಾಪಿಸಿದ ಮಂಗಳಮುಖಿ ಸದಸ್ಯೆಯರು, ಡಾ.ಸುಮತಿ ಎಸ್ ಹೆಗ್ಡೆ ಗೆದ್ದು ಬಂದಲ್ಲಿ ತಮಗೆ ಶಾಶ್ವತ ನಿವೇಶನ ನೀಡುವ ಬಗ್ಗೆ ಅವಹಾಲು ಸಲ್ಲಿಸಿರುವ ವಿಚಾರಕ್ಕೆ ಸಕಾರಾತ್ಮಕವಾಗಿ ಸ್ಪಂಧಿಸಿದ ಜೆಡಿಎಸ್ ಪಕ್ಷದ ಅಭ್ಯರ್ಥಿಯ ಬಗ್ಗೆ ಮೆಚ್ಷುಗೆಯನ್ನು ವ್ಯಕ್ತಪಡಿಸಿ, ಪಕ್ಷದ ಪರವಾಗಿ ಕೆಳಸ ಮಾಡುವುದಾಗಿಯೂ ವಿವರಿಸಿದರು.
ಕಳೆದ ಬಾರಿ ಬಿಜೆಪಿಗೆ ಮತನೀಡಿ, ಗೆದ್ದ ನಂತರ ಕಡೆಗಣಿಸಿದ ಶಾಸಕನ ಬಗ್ಗೆ ಆಕ್ರೋಶಗೊಂಡು, ಬಹಳ ಭಾವುಕರಾಗಿ ನುಡಿದರು.
ಪಕ್ಷದ ತತ್ವ ಸಿಧ್ದಾಂತವನ್ನು ಒಪ್ಪಿಕೊಂಡು ಬಂದ ಕಾರ್ಯಕರ್ತೆಯರಿಗೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಜೆಡಿಎಸ್ ಅಭ್ಯರ್ಥಿ ಡಾ.ಸುಮತಿ ಎಸ್ ಹೆಗ್ಡೆ ಪಕ್ಷದ ಧ್ವಜ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು. ಪ್ರಿಯಾ ಸಾಲಿಯಾನ್ ಕಾರ್ಯಕ್ರಮ ನಿರೂಪಿಸಿದರು. ವಿನ್ಸೆಂಟ್ ಪೆರೇರಾ ಧನ್ಯವಾದಗೈದರು.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ