ಮಂಗಳೂರು: ನಾನು ತೆರಿಗೆ ಪಾವತಿದಾರ. ವರ್ಷಕ್ಕೆ ಕೋಟ್ಯಂತರ ರೂ. ತೆರಿಗೆ ಪಾವತಿಸುತ್ತೇನೆ. ಬಿಜೆಪಿ ಮುಖಂಡರು ಸೋಲಿನ ಹತಾಶೆಯಿಂದ ಬೆಂಗಳೂರಿನ ನನ್ನ ಮನೆ ಮೇಲೆ ಐಟಿ ದಾಳಿಸಿ ಮಾಡಿಸಿದ್ದಾರೆ. ಆದರೆ ಅವರಿಗೆ ಅಲ್ಲಿ ಏನು ಸಿಕ್ಕಿಲ್ಲ. ಬರಿಗೈಯಲ್ಲಿ ವಾಪಸಾಗಿದ್ದಾರೆ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಹೇಳಿದ್ದಾರೆ.
ಪುತ್ತೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಪುತ್ತೂರಿನಲ್ಲಿ ಬಿಜೆಪಿ ಅಭ್ಯರ್ಥಿ ಸೋಲುವುದು ಆ ಪಕ್ಷದ ಮುಖಂಡರಿಗೆ ಖಚಿತವಾಗಿದೆ. ಈ ಕಾರಣ ಹತಾಶೆಯಿಂದ ಮೈಸೂರಿನಲ್ಲಿರುವ ನನ್ನ ಸಹೋದರನ ಮನೆ ಮೇಲೆ ಐಟಿ ದಾಳಿ ನಡೆಸಿದ್ದಾರೆ ಎಂದರು.
ನನ್ನ ಸಹೋದರನ ವ್ಯವಹಾರವೇ ಬೇರೆ ಅದೇರೀತಿ ನನ್ನ ಉದ್ಯಮ, ರಾಜಕೀಯ ಕ್ಷೇತ್ರವೇ ಬೇರೆ. ಆತ ತೆರಿಗೆ ಪಾವತಿದಾರ ನನಗೂ ಅವರಿಗೂ ವ್ಯವಹಾರಿಕ ಸಂಬಂಧಗಳಿಲ್ಲ. ನನಗೆ ದೊರೆತಿರುವ ಅಭೂತಪೂರ್ವ ಜನಬೆಂಬಲ ನೋಡಿ ಕಂಗಾಲಾಗಿ ಈ ಐಟಿ ದಾಳಿ ರಾಜಕೀಯ ಆರಂಭಿಸಿದ್ದಾರೆ ಎಂದು ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಡಿ.ವಿ ಸದಾನಂದ ಗೌಡ ನಾನು ಮಿತ್ರನಲ್ಲ ಶತ್ರು ಎಂದಿದ್ದಾರೆ. ಡಿ.ವಿ ಸದಾನಂದ ಗೌಡ ನನಗೆ ಯಾವತ್ತೂ ಶತ್ರು ಅಲ್ಲ. ಆಪ್ತ ಮಿತ್ರರು. ನನಗೆ ಯಾರೂ ಶತ್ರುಗಳಿಲ್ಲ. ಎಲ್ಲರೂ ಮಿತ್ರರೇ ಎಂದರು.
ಭೋಪಾಲ್ನ ಪ್ರತಿ ಬೂತ್ನಲ್ಲಿ ಲಕ್ಕಿ ಡ್ರಾ ನಡೆಸಲಾಗಿದೆ. ಅದರಲ್ಲಿ ಅದೃಷ್ಟಶಾಲಿ ಮತದಾರರಿಗೆ ಉಡುಗೊರೆ ಸಿಗಲಿದೆ ಎಂದು ಘೋಷಣೆ ಮಾಡಲಾಗಿತ್ತು. ಹೀಗೇ…
ಯುನೈಟೆಡ್ ಸ್ಟೇಟ್ಸ್ನಲ್ಲಿ ಪತ್ತೆಯಾದ ಈ ಭಿನ್ನ ಗುಂಪನ್ನು ತೀವ್ರ ತೀವ್ರ ಉಸಿರಾಟದ ಸಿಂಡ್ರೋಮ್ ಕೊರೊನಾ ವೈರಸ್ 2 (SARS-CoV-2) ಫ್ಲರ್ಟ್…
ಚುನಾವಣೆ ಬಳಿಕ ಇವಿಎಂ ಯಂತ್ರಗಳು ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್ಗೆ ಬೆಂಕಿ ತಗುಲಿರುವ ಘಟನೆ ಮಧ್ಯಪ್ರದೇಶದ ಬೇತುಲ್ನಲ್ಲಿ ನಡೆದಿದೆ.…
ಕೆಜಿಎಪ್ ಸಿನಿಮಾದ ನಾಯಕಿ ಶ್ರೀನಿಧಿ ಶೆಟ್ಟಿಯವರು ತನ್ನ ಕುಟುಂಬದ ದೈವಗಳಿಗೆ ಹೇಳಿದ್ದ ಹರಕೆಯ ನೇಮೋತ್ಸವವನ್ನು ನೆರವೇರಿಸಿದರು. ಮಂಗಳೂರಿನ ಹೊರವಲಯದ ಕಿನ್ನಿಗೋಳಿ…
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ, ಜಾನಪದ ವಿದ್ವಾಂಸ, ಸಾಹಿತಿ, ಶಿಕ್ಷಕ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ (79) ಮಂಗಳವಾರ…
ಅಪಹರಣಕ್ಕೊಳಗಾದ ಮಗವನ್ನ ಮೂರು ದಿನದಲ್ಲಿಯೇ ಬಬೀದರ ನಗರ ಪೊಲೀಸರು ಪತ್ತೆ ಹಚ್ಚಿದ್ದಾರೆ. ಮೇ 4 ರಂದು ಬೀದರ್ನ ಓಲ್ಡ್ ಸಿಟಿಯ…