ಮಂಗಳೂರು: ಕಾಂಗ್ರೆಸ್ ಮುಖಂಡ ವಿವೇಕ್ ರಾಜ್ ಪೂಜಾರಿ ಅವರ ನಗರದ ಎರಡು ಮನೆ ಮತ್ತು ಕಚೇರಿಗೆ ಶನಿವಾರ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಬೆಳಗ್ಗೆ ಸುಮಾರು 7 ಗಂಟೆಗೆ 14 ಮಂದಿ ಅಧಿಕಾರಿಗಳ ತಂಡ ವಿವೇಕ್ ರಾಜ್ ಅವರಿಗೆ ಸೇರಿದ ಅತ್ತಾವರ, ಮಣ್ಣಗುಡ್ಡೆಯಲ್ಲಿರುವ ಎರಡು ಮನೆಗಳಿಗೆ ಹಾಗೂ ವಿವೇಕನಗರದಲ್ಲಿರುವ ಕಚೇರಿಗೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು ನಾನು ತೆರಿಗೆ ವಂಚಿಸಿ ವ್ಯವಹರಿಸುವುದಿಲ್ಲ. ಇದು ಬಿಜೆಪಿಗರ ಕುಮ್ಮಕ್ಕಿನಿಂದ ಐಟಿ ದಾಳಿ ನಡೆದಿದೆ ಎಂದು ಆರೋಪಿಸಿದ್ದಾರೆ.