News Karnataka Kannada
Friday, May 10 2024
ಮಂಗಳೂರು

ಮಂಗಳೂರು: ಕಸ್ತೂರಿ ರಂಗನ್ ವರದಿ ಜಾರಿಯಾದರೆ ಲಕ್ಷಾಂತರ ಮಂದಿ ಬೀದಿಪಾಲು ಎಂದ ಐವನ್ ಡಿಸೋಜಾ

If Kasturirangan report is implemented, lakhs of people will be on the streets, says Ivan D'Souza
Photo Credit : News Kannada

ಮಂಗಳೂರು:  ಕಸ್ತೂರಿರಂಗನ್ ವರದಿ ಜಾರಿ ನಿಟ್ಟಿನಲ್ಲಿ ಕೇಂದ್ರ ಸರಕಾರದ ಪರಿಸರ ಇಲಾಖೆಯು ಪಶ್ಚಿಮಘಟ್ಟದ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಿ ಅಧಿಸೂಚನೆ ಹೊರಡಿಸಿರುವ ಕಾರಣ ಕಾಡಿನ ಬದಿಯಲ್ಲಿ ವಾಸಿಸುತ್ತಿರುವ ಲಕ್ಷಾಂತರ ಮಂದಿ ಪಾಲಾಗಲಿದ್ದಾರೆ . ಹೀಗಾಗಿ ಕೂಡಲೇ ಅಧಿಸೂಚನೆಯನ್ನು ಕೈಬಿಡಬೇಕೆಂದು ವಿಧಾನಪರಿಷತ್ ಮಾಜಿ ಸದಸ್ಯ ಐವನ್ ಡಿ ಸೋಜಾ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ .

ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ 2017ರಲ್ಲಿ ಆಗಿನ ಕಾಂಗ್ರೆಸ್ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದಿತ್ತು ಪ್ರಾಯೋಗಿಕ ವರದಿ ಪಡೆದು ಅನಂತರ ಕ್ರಮಕೈಗೊಳ್ಳುವಂತೆ ತಿಳಿಸಲಾಗಿತ್ತು . ಬಿಜೆಪಿ ಸಚಿವರು ಸಂಸದರು ಕಸ್ತೂರಿರಂಗನ್ ಜಾರಿಗೊಳಿಸಲು ಬಿಡುವುದಿಲ್ಲ ಎಂದು ಹೇಳಿಕೆ ನೀಡಿದ್ದರೂ ಅಧಿಸೂಚನೆ ಬಳಿಕ ಯಾರೂ ಮಾತನಾಡುತ್ತಿಲ್ಲ ಎಂದರು .

ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಕರ್ನಾಟಕ ಇಪ್ಪತ್ತೊಂದು ಸಾವಿರ ಚದರ ಕಿಲೋ ಮೀಟರ್ ಪ್ರದೇಶ ಒಳಗೊಂಡಿದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 43 ಗ್ರಾಮಗಳು ಪರಿಸರ ಸೂಕ್ಷ್ಮ ಎಂದು ಘೋಷಣೆ ಘೋಷಣೆಯಾಗಿದೆ ರಾಜ್ಯದ 1,595 ಗ್ರಾಮಗಳು ಇದರೊಳಗೆ ಅಡಕವಾಗಿದ್ದು ಈ ಪ್ರದೇಶಗಳಿಂದ 13674  ಅರ್ಜಿಗಳು ಅರಣ್ಯ ಹಕ್ಕು ಕಾಯ್ದೆಯಡಿ ಅಕ್ರಮ ಸರಕಾರಕ್ಕೆ ಸಲ್ಲಿಕೆಯಾಗಿದೆ ಹೀಗಾಗಿ ಈ ಅರ್ಜಿಗಳನ್ನು ಇತ್ಯರ್ಥಪಡಿಸಿ ಅವರಿಗೆ ಹಕ್ಕುಪತ್ರ ನೀಡಬೇಕೆಂದು ಆಗ್ರಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು