News Karnataka Kannada
Monday, April 29 2024
ಮಂಗಳೂರು

ಮಂಗಳೂರು: ಸುರತ್ಕಲ್ ಅಕ್ರಮ ಟೋಲ್, ಹಿಂದೂ ಮಹಾಸಭಾ ಆಕ್ರೋಶ

Illegal toll in Surathkal, Hindu Mahasabha protests
Photo Credit : News Kannada

ಮಂಗಳೂರು: ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವುಗೊಳಿಸುವಂತೆ ಮತ್ತು ತಕ್ಷಣ ಟೋಲ್ ಸಂಗ್ರಹ ನಿಲ್ಲಿಸುವಂತೆ ಪ್ರತಿಭಟಿಸಿದ ಟೋಲ್ ವಿರೋಧಿ ಹೋರಾಟ ಸಮಿತಿ ಹಾಗೂ ಅದಕ್ಕೆ ಪಕ್ಷಾತೀತವಾಗಿ ಬೆಂಬಲ ಸೂಚಿಸಿದ ಸಂಘ ಸಂಸ್ಥೆಗಳ ಹಾಗೂ ಸ್ಥಳೀಯ ನಾಗರಿಕರ ಮೇಲೆ ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಅಧಿಕಾರ ದುರುಪಯೋಗಪಡಿಸಿ ಹೋರಾಟಗಾರರ ಮೇಲೆ ಪೊಲೀಸರಿಂದ ದಬ್ಬಾಳಿಕೆ ಮಾಡಿರುವುದನ್ನು ಅಖಿಲ ಭಾರತ ಹಿಂದೂ ಮಹಾ ಸಭಾ ಕರ್ನಾಟಕ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ರಾಜೇಶ್ ಪವಿತ್ರನ್ ಅವರು ತೀವ್ರವಾಗಿ ಖಂಡಿಸಿದರು.

ಅಕ್ರಮ ಟೋಲ್ ಗೇಟ್ ನಲ್ಲಿ ದಬ್ಬಾಳಿಕೆಯಿಂದ ಸುಂಕ ವಸೂಲಿ ಮಾಡುವವರ ವಿರುದ್ಧ ಹೋರಾಟವನ್ನು ಮಾಡಿ ಹಗಲು ದರೋಡೆ ಮಾಡುವುದನ್ನು ತಡೆಯಲು ಯತ್ನಿಸಿದಾಗ , ಸಾರ್ವಜನಿಕರಿಗೆ ಪೊಲೀಸರ ಮುಖಾಂತರ ದಬ್ಬಾಳಿಕೆ ನಡೆಸಿದ ಬಿಜೆಪಿ ಸರಕಾರದ ನಡೆ ನಾಚಿಕೆಗೇಡಿನ ಆಗಿದ್ದು ಇದು ಸ್ಪಷ್ಟವಾಗಿ ಲೂಟಿಕೋರರ ಕಂಪೆನಿಯ ಜೊತೆ ಸರ್ಕಾರ ಶಾಮೀಲಾಗಿರುವುದನ್ನು ಎತ್ತಿತೋರಿಸುತ್ತದೆ .ಇವರಿಗೆ ತಕ್ಕ ಉತ್ತರವನ್ನು ಸುರತ್ಕಲ್ ಕ್ಷೇತ್ರದ ಜನರು ಬರುವಂತೆ ಚುನಾವಣೆಯಲ್ಲಿ ಬಿಜೆಪಿಗೆ ಕೊಡಲಿದ್ದಾರೆಂದು ಎಂದು ರಾಜೇಶ್ ಪವಿತ್ರನ್ ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು