News Karnataka Kannada
Sunday, May 05 2024
ಮಂಗಳೂರು

ಮಂಗಳೂರು: ದ.ಕ ಜಿಲ್ಲೆಯನ್ನ ನೆರೆ ಪೀಡಿತ ಜಿಲ್ಲೆಯೆಂದು ಘೋಷಿಸಿ ಪರಿಹಾರ ಒದಗಿಸಲಿ ಎಂದ ಐವನ್ ಡಿಸೋಜಾ 

Mangaluru: Ivan D'Souza wants Dakshina Kannada district to be declared a flood-hit district and relief should be provided. 
Photo Credit : By Author

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಯಲ್ಲಿ ಈ ಬಾರಿ ಗರಿಷ್ಠ ಪ್ರಮಾಣದ ಮಳೆಯಾಗಿದೆ. ಸಾಕಷ್ಟು ಆಸ್ತಿ ಪಾಸ್ತಿಗಳಿಗೆ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯನ್ನು ನೆರೆ ಪೀಡಿತ ಜಿಲ್ಲೆಯೆಂದು ಘೋಷಿಸಿ ಪರಿಹಾರ ಒದಗಿಸಬೇಕೆಂದು ಮಾಜಿ ಶಾಸಕ ಐವನ್ ಡಿಸೋಜಾ ಆಗ್ರಹಿಸಿದ್ದಾರೆ.

ಅವರು ಮಂಗಳೂರಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆಯಿಂದಾಗಿ ಜಿಲ್ಲೆಯಲ್ಲಿ ೪೨೯ ಮನೆ ಭಾಗಶಃ ಹಾನಿಗೀಡಾಗಿದೆ. ೫೬ಮನೆಗಳು ಸಂಪೂರ್ಣ ಹಾನಿಗೀಡಾಗಿದೆ. ಸರ್ಕಾರ ೫ಕೋಟಿ ರೂ ಪರಿಹಾರ ನೀಡುವುದಾಗಿ ತಿಳಿಸಿದೆ.

ಕಳೆದ ಬಾರಿ ಮಳೆಯಿಂದ ಹಾನಿಗೀಡಾದ ಸಂತ್ರಸ್ತರಿಗೆ ಇದುವರೆಗೆ ಪರಿಹಾರ ದೊರೆತ್ತಿಲ್ಲ.ಈ ಬಾರಿ ಪರಿಹಾರ ಘೋಷಿಸಿದ ರೀತಿಯೂ ಸರಿಯಿಲ್ಲ. ಸಂಪೂರ್ಣ ಹಾನಿಗೀಡಾದ ಮನೆಗೆ ೯೦ ಸಾವಿರ ರೂ, ಭಾಗಶಃ ಹಾನಿಗೀಡಾದ ಮನೆಗೆ ೧೦ಸಾವಿರ ರೂ ಪರಿಹಾರ ಎಂದು ಘೋಷಣೆ ಮಾಡಿರುವ ಮೊತ್ತದಿಂದ ಸಂತ್ರಸ್ತರಿಗೆ ಸಹಾಯ ಮಾಡಿದಂತಾಗುವುದಿಲ್ಲ.

ಪರಿಹಾರದ ಮೊತ್ತವನ್ನು ಹೆಚ್ಚಿಸಬೇಕು. ಸರ್ಕಾರ ಜಿಲ್ಲೆ ಯನ್ನು ನೆರೆಪೀಡಿತ ಪ್ರದೇಶ ಎಂದು ಘೋಷಣೆ ಮಾಡುವುದರಿಂದ ಮಳೆಯಿಂದ ಹಾನಿಗೀಡಾದ ಸಂತ್ರಸ್ತರಿಗೆ ,ಬೆಳೆಗಾರರಿಗೆ ನೆರವಾಗಲು ಸಾಧ್ಯವಿದೆ ಎಂದು ಐವನ್ ಡಿ ಸೋಜ ತಿಳಿಸಿದ್ದಾರೆ.ಜಿಲ್ಲೆಯ ಸಂತ್ರಸ್ತರಿಗೆ ತಾತ್ಕಾಲಿಕವಾಗಿ ಆರಂಭಿಸಲಾದ ಪರಿಹಾರ ಕೇಂದ್ರ ಗಳಿಗೆ ಬೆರಳೆಣಿಕೆಯಷ್ಟು ಮಂದಿ ಮಾತ್ರ ಹಾಜರಾಗುತ್ತಿದ್ದಾರೆ.

ಇದು ಈ ಕೇಂದ್ರ ಗಳ ಗುಣಮಟ್ಟವನ್ನು ಸೂಚಿಸುತ್ತದೆ. ಆರೋಗ್ಯ ಕೇಂದ್ರ ,ಆಸ್ಪತ್ರೆಗಳಲ್ಲಿ ಸಾಂಕ್ರಾಮಿಕ ರೋಗ ಪೀಡಿತ ರಿಗೆ ಕೋರನಾ ಕಾರಣ ನೀಡಿ ಸಮರ್ಪಕ ಚಿಕಿತ್ಸೆ ದೊರೆಯುತ್ತಿಲ್ಲ. ಉಸ್ತುವಾರಿ ಸಚಿವರು ಈ ಬಗ್ಗೆ ಗಮನಹರಿಸ ಬೇಕಾಗಿತ್ತು ಎಂದು ಐವನ್ ತಿಳಿಸಿದ್ದಾರೆ.

ಸಿದ್ದರಾಮಯ್ಯರ ೭೫ ಹುಟ್ಟಿದ ಹಬ್ಬಕ್ಕೆ ಭರದ ಸಿದ್ಧತೆ: ಆ.೩ರಂದು ದಾವಣಗೆರೆಯಲ್ಲಿ  ಕಾರ್ಯಕ್ರಮ ನಡೆಯಲಿದೆ

ರಾಜ್ಯ ಕಂಡ ಅತ್ಯುತ್ತಮ ನಾಯಕ,ಸಾಮಾಜಿಕ ನ್ಯಾಯದ ಪ್ರತಿಪಾದಕ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ೭೫ ಹುಟ್ಟು ಹಬ್ಬ ಆ.೩ರಂದು ದಾವಣಗೆರೆ ಯಲ್ಲಿ ಕೆಪಿಸಿಸಿ ನೇತೃತ್ವದಲ್ಲಿ ಅಭಿಮಾನಿಗಳು ಸೇರಿ ನಡೆಸಲು ನಿರ್ಧರಿಸಲಾಗಿದೆ ಎಂದು ಕಾರ್ಯಕ್ರಮ ಸಂಘಟನಾ ಸಮಿತಿಯ ಪ್ರದಾನ ಕಾರ್ಯದರ್ಶಿ ಐವನ್ ಡಿಸೋಜಾ ಹೇಳಿದರು.

ಸೇವೆಯನ್ನು ಜನತೆಗೆ ನೆನಪಿಸಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ನಿಟ್ಟಿನಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಎಐಸಿಸಿಯ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಮುಖಂಡ ರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸುಮಾರು ೧೦ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಐವನ್ ಡಿ’ಸೋಜಾ ತಿಳಿಸಿದ್ದಾರೆ.

ಸುದ್ದಿ ಗೋಷ್ಠಿಯಲ್ಲಿ ಮಾಜಿ ಮನಪಾ ಸದಸ್ಯ ರಾದ ಭಾಸ್ಕರ ರಾವ್,ಸಬಿತಾ ಮಿಸ್ಕಿತ್, ಕೆಪಿಸಿಸಿ ಕಾರ್ಯ ದರ್ಶಿ ಚಿತ್ತರಂಜನ್ ಶೆಟ್ಟಿ ಬೊಂಡಾಲ,ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿ ಪ್ರಕಾಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30359
ಶರಣ್‌ ರಾಜ್

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು