ಮಂಗಳೂರು: ರಿಜ್ವಾನ್ ಆರ್ಶದ್ ಶಾಸಕರಾಗಿರುವ ಬೆಂಗಳೂರಿನ ಶಿವಾಜಿನಗರ ವಿಧಾನಸಭಾ ಕ್ಷೇತ್ರ, ಯು.ಟಿ. ಖಾದರ್ ಪ್ರತಿನಿಧಿಸುತ್ತಿರುವ ಮಂಗಳೂರು ಸೇರಿದಂತೆ ರಾಜ್ಯದ ಏಳು ವಿಧಾನ ಸಭಾ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನುಕಣಕ್ಕಿಳಿಸದಿರಲು ಜಾತ್ಯತೀತ ಜನತಾದಳ ನಿರ್ಧರಿಸಿದೆ.
ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಮುಸ್ಲಿಂ ಧರ್ಮ ಗುರುಗಳ ವಿನಂತಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಕರಾತ್ಮಕವಾಗಿ ಸ್ಪಂದಿಸಿ ಈ ನಿರ್ಧಾರ ಕೈಗೊಂಡಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಮತಗಳು ವಿಭಜನೆ ಆಗುವಂತಾಗಬಾರದು ಎಂದು ಧರ್ಮ ಗುರುಗಳು ಜೆಡಿಎಸ್ ಮುಖಂಡರನ್ನು ವಿನಂತಿ ಮಾಡಿದ್ದರು.