ಮಂಗಳೂರು: ಮಂಗಳೂರು ದಕ್ಷಿಣ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮತಿ ಹೆಗ್ಡೆ ಜಯಗಳಿಸಿದಲ್ಲಿ ಜಿಲ್ಲೆಗೆ ಸರಕಾರಿ ವೈದ್ಯಕೀಯ ಮಂಜೂರಾಗುವಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮದು ಎಂದು ಜೆಡಿಎಸ್ ಮುಖಂಡ ಶಾ ಜಮೀರ್ ಸೈಯದ್ ಹೇಳಿದರು.
ನ್ಯೂಸ್ ಕನ್ನಡ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು ಜಿಲ್ಲೆಯನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿಸುವ ಜವಾಬ್ದಾರಿ ನಮ್ಮದು ಎಂದರು. ಜಲಧಾರೆ ಯೋಜನೆ ಮೂಲಕ 2 ಸಾವಿರ ಟಿಎಂಸಿ ನೀರನ್ನು ಜಿಲ್ಲೆಗೆ ಒದಗಿಸುವ ಯೋಜನೆ ರೂಪಿಸಲಾಗುವುದು ಎಂದರು.