Categories: ಮಂಗಳೂರು

ಮಂಗಳೂರು: ಐ ಲವ್ ಕುಡ್ಲ ಕಲಾಕೃತಿಯ ಲೋಕಾರ್ಪಣೆಗೊಳಿಸಿದ ಜಸ್ಟಿಸ್ ಸಂತೋಷ್ ಹೆಗ್ಡೆ

ಮಂಗಳೂರು:  ರಾಮಕೃಷ್ಣ ಮಠದ ಪ್ರೇರಣೆಯಿಂದ ಮುನ್ನಡೆಯುತ್ತಿರುವ ಸ್ವಚ್ಛ ಮಂಗಳೂರು ಫೌಂಡೇಶನ್ ವತಿಯಿಂದ ‘ಐ ಲವ್ ಕುಡ್ಲ’ ಎಂಬ ಕಲಾಕೃತಿಯನ್ನು ನಗರದ ಹಂಪನಕಟ್ಟೆಯಲ್ಲಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರ ಹಾಗೂ ಮಾಜಿ ಲೋಕಾಯುಕ್ತ ಜಸ್ಟಿಸ್ ಎನ್. ಸಂತೋಷ್ ಹೆಗ್ಡೆ ಅವರು ಅನಾವರಣಗೊಳಿಸಿದರು.

ಎನ್. ಸಂತೋಷ್ ಹೆಗ್ಡೆ ಅವರು ಮಾತನಾಡಿ, ಮಾನವನ ಅತಿ ಆಸೆಯೇ ಎಲ್ಲಾ ರೀತಿಯ ಪ್ರಕೃತಿನಾಶ ಹಾಗೂ ತ್ಯಾಜ್ಯ ಉತ್ಪತ್ತಿಗೆ ಕಾರಣವಾಗಿದೆ. ಸಂಪನ್ಮೂಲಗಳನ್ನು ಬೇಕಾದಷ್ಟೇ ಬಳಸಿದರೆ ಕಸದ ಹೊರೆ ಕಡಿಮೆಯಾಗುತ್ತದೆ. ಸ್ವಚ್ಛತೆಯನ್ನು ಸಾಧಿಸುವಲ್ಲಿಯೂ ಈ ಕಡಿಮೆ ಬಳಕೆಯ ಮಂತ್ರವನ್ನು ಪಾಲಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು. ಮಹತ್ವಾಕಾಂಕ್ಷೆಯಿರುವುದು ತಪ್ಪಲ್ಲ ಆದರೆ ಹಣ, ವಸ್ತುಗಳನ್ನು ಹಾಗೂ ಸೇವೆಗಳನ್ನು ಪಡೆಯಲು ಯಾರನ್ನೂ ನೋಯಿಸದೇ ಇರುವುದೇ ನೈಜ ನಾಗರೀಕನ ಧರ್ಮ ಎಂದರು . ಸ್ವಾರ್ಥರಹಿತ ಹಾಗೂ ಜವಾಬ್ದಾರಿಯುತ ನಾಗರಿಕರಿಂದ ಸ್ವಚ್ಛ ಸಮಾಜದ ನಿರ್ಮಾಣ ಸಾಧ್ಯ ಎಂದರು.

ಇನ್ನೋರ್ವ ಅತಿಥಿಗಳಾದ ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಪಿ. ಸುಬ್ರಮಣ್ಯ ಯಡಪಡಿತ್ತಾಯ ಮಾತನಾಡಿ, ಮಂಗಳೂರಿನ ರಾಮಕೃಷ್ಣ ಆಶ್ರಮದ ಸ್ವಚ್ಛತಾ ಅಭಿಯಾನದ ಯಶಸ್ಸನ್ನು ಶ್ಲಾಘಿಸಿದರು. ಹಲವಾರು ಕಾರ್ಯಕರ್ತರ ಸ್ವಾರ್ಥ ರಹಿತ ಸೇವೆಯಿಂದ ಇಂಥಹಾ ಸಾಧನೆ ಸಾಧ್ಯವಾಗಿದೆ. ಎಲ್ಲಿ ಬದ್ದತೆ ಮತ್ತು ಸೇವೆ ಇರುತ್ತದೆಯೋ ಅಲ್ಲಿ ಮಹತ್ಕಾರ್ಯಗಳು ಆಗುತ್ತವೆ ಎಂದರು.

ರಾಮಕೃಷ್ಣ ಮಠದ ಸ್ವಾಮಿ ರಘು ರಾಮಾನಂದಜಿ, ಸಭಾ ಕಾರ್ಯಕ್ರಮ ಉದ್ಘಾಟಿಸಿ, ಆಶೀರ್ವಚನ ನೀಡಿದರು. ಹಲವರ ಪ್ರಯತ್ನದ ಪರಿಣಾಮವಾಗಿರುವ ಸ್ವಚ್ಛ ಮಂಗಳೂರು ಅಭಿಯಾನ ಮುಂಬರುವ ದಿನಗಳಲ್ಲಿ ಇನ್ನಷ್ಟು ಉತ್ತಮ ರೀತಿಯಲ್ಲಿ ಯಶಸ್ವಿಯಾಗಲಿ ಎಂದು ಹಾರೈಸಿದರು.

ಕರ್ನಾಟಕ ವಿಧಾನ ಪರಿಷತ್ ಮಾಜಿ ಸದಸ್ಯ ಹಾಗು ಸ್ವಚ್ಚ ಮಂಗಳೂರು ಫೌಂಡೇಶನ್ ನ ಮಾರ್ಗದರ್ಶಕರಾದ ಕ್ಯಾ. ಗಣೇಶ್ ಕಾರ್ಣಿಕ್ ಆಶಯ ಭಾಷಣ ಮಾಡಿ ಸ್ವಾಗತಿಸಿದರು.

ಸ್ವಚ್ಛ ಮಂಗಳೂರು ಫೌಂಡೇಶನ್ ನ ಅಧ್ಯಕ್ಷ ಉಮನಾಥ ಕೋಟೇಕಾರ್ ವೇದಿಕೆಯಲ್ಲಿ ಉಸ್ಥಿತರಿದ್ದರು. ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರ ಡಿ. ವೇದವ್ಯಾಸ ಕಾಮತ್ ಸಭೆಯಲ್ಲಿ ಉಪಸ್ಥಿತರಿದ್ದರು.

ಕಲಾಕೃತಿ ತಯಾರಿಸಿದ ವಿಕ್ರಂ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ರಂಜನ್ ಬೆಳ್ಳರ್ಪಾಡಿ ವಂದಿಸಿದರು. ಅಭಿಷೇಕ್ ಶೆಟ್ಟಿ ನಿರೂಪಿಸಿದರು.
ಮಂಗಳೂರು ಮಹಾನಗರದ ಜಾಗೃತ ನಾಗರಿಕರು ಮತ್ತು ಸ್ವಚ್ಚ ಮಂಗಳೂರಿನ ಸ್ವಯಂಸೇವಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Ashika S

Recent Posts

ಮಲಯಾಳಂ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ…

47 mins ago

ಮುಸ್ಲಿಂ ಯುವತಿಯೊಂದಿಗೆ ಮದುವೆ : ಖಾಕಿ ವಿರುದ್ಧ ಹಿಂದೂ ಸಂಘಟನೆ ಪ್ರತಿಭಟನೆ

ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್​ಪಿ ಕಚೇರಿಗೆ ಬಂದಿದ್ದು,…

1 hour ago

ಹಾಸ್ಟೆಲ್‌ ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಪುಣೆಯ (COEP) ಹಾಸ್ಟೆಲ್‌ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್‌ನ ಎಲ್ಲ ವಿದ್ಯಾರ್ಥಿನಿಯರು…

2 hours ago

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ…

2 hours ago

ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ : ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು?

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…

2 hours ago

ಡಾ. ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ನಗರದ ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಿ.ಜಿ ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ…

2 hours ago