ಮಂಗಳೂರು: ಶತಮಾನದ ಹೊಸಿಲಿನಲ್ಲಿರುವ ಕರ್ಣಾಟಕ ಬ್ಯಾಂಕಿಗೆ ಕನ್ನಡ ಸಾಹಿತ್ಯ ಪರಿಷತ್ನಿಂದ ಸಮ್ಮಾನದ ಗೌರವ ಪ್ರತಿಷ್ಠಿತ ಕರ್ಣಾಟಕ ಬ್ಯಾಂಕ್ ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಕನ್ನಡ ಸ್ವಾಭಿಮಾನಾಭಿವೃದ್ಧಿಗೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ಹಾವೇರಿಯಲ್ಲಿ ನಡೆಯುತ್ತಿರುವ ೮೬ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಮ್ಮಾನಿಸಿ ಗೌರವಿಸಲಾಯಿತು.
ಬ್ಯಾಂಕಿನ ಆಡಳಿತ ನಿರ್ದೇಶಕರು ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಾದ ಮಹಾಬಲೇಶ್ವರ ಎಂ. ಎಸ್. ಅವರು ಬ್ಯಾಂಕಿನ ಪರವಾಗಿ ಸಮ್ಮಾನ ಸ್ವೀಕರಿಸಿದರು.
ಕರ್ಣಾಟಕ ಬ್ಯಾಂಕಿಗೆ ಕನ್ನಡ ಸಾಹಿತ್ಯ ಪರಿಷತ್ನಿಂದ ಸಂದ ಗೌರವಕ್ಕೆ ಆಭಾರಮನ್ನಣೆ ಸಲ್ಲಿಸಿ ಸಂತಸ ವ್ಯಕ್ತ ಪಡಿಸಿದ ಮಹಾಬಲೇಶ್ವರ ಎಂ. ಎಸ್. ಅವರು ೧೯೧೫ ರಲ್ಲಿ ಆರಂಭವಾದ ಕನ್ನಡ ಸಾಹಿತ್ಯ ಪರಿಷತ್ ಹಾಗೂ ೧೯೨೪ ರಲ್ಲಿ ಆರಂಭವಾದ ಕರ್ಣಾಟಕ ಬ್ಯಾಂಕ್ ಇವೆರಡೂ ಕರ್ನಾಟಕದ ಹೆಮ್ಮೆ. ಕರ್ನಾಟಕ ಏಕೀಕರಣ ಚಳುವಳಿಯು ಭಾರತದ ಸ್ವಾತಂತ್ರ್ಯ ಚಳುವಳಿಯ ಭಾಗವಾಗಿ ಹುಟ್ಟಿ, ಸ್ವದೇಶೀ ಆಂದೋಲನದ
ರೀತಿಯಲ್ಲೇ ನವಭಾರತದ ನಿರ್ಮಾಣದಲ್ಲಿ ಅಸಾಧಾರಣ ಪಾತ್ರ ವಹಿಸಿದೆ ಎನ್ನುವುದು ಈ ಸಂದರ್ಭದಲ್ಲಿ ಗಮನಾರ್ಹ.
ಕನ್ನಡ ನಾಡು-ನುಡಿಯ ಅಭಿವೃದ್ಧಿಯಲ್ಲಿ ಕರ್ಣಾಟಕ ಬ್ಯಾಂಕ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ ತೊಡಗಿಸಿಕೊಂಡ ರೀತಿಯು ಅನನ್ಯ ಹಾಗೂ ಐತಿಹಾಸಿಕ. ಶತಮಾನವನ್ನು ಪೂರೈಸಿದ ಕನ್ನಡ ಸಾಹಿತ್ಯ ಪರಿಷತ್ ಸಂಸ್ಥೆ, ಶತಮಾನದ ಹೊಸಿಲಿನಲ್ಲಿರುವ ಕರ್ಣಾಟಕ ಬ್ಯಾಂಕಿನ ಶತಮಾನದ
ಸಾಧನೆಯನ್ನು ಗುರುತಿಸಿ, ಹಾವೇರಿಯಲ್ಲಿ ಇಂದು ನಡೆದ ೮೬ ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಗೌರವಿಸಿರುವುದು ಒಂದು ಐತಿಹಾಸಿಕ ಘಟನೆ. ಇದಕ್ಕಾಗಿ ಕರ್ಣಾಟಕ ಬ್ಯಾಂಕಿನ ಪರವಾಗಿ ಕನ್ನಡ ಸಾಹಿತ್ಯ ಪರಿಷತ್ತಿಗೆ ಧನ್ಯವಾದಗಳನ್ನು ಸಮರ್ಪಿಸುತ್ತಿದ್ದೇನೆ ಎಂದು ನುಡಿದರು.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ