News Karnataka Kannada
Monday, May 06 2024
ಮಂಗಳೂರು

ಮಂಗಳೂರು: ಕರ್ಣಾಟಕ ಬ್ಯಾಂಕಿಗೆ ಕೇಂದ್ರ ಸರಕಾರದಿಂದ ಪ್ರತಿಷ್ಠಾ ಪುರಸ್ಕಾರ ಗೌರವ

Karnataka Bank honoured with Pratishtha Puraskar by Central Government
Photo Credit : By Author

ಮಂಗಳೂರು: ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಕರ್ಣಾಟಕ  ಬ್ಯಾಂಕ್ ‘ಭೀಮ್-ಯುಪಿಐ ವಹಿವಾಟುಗಳಲ್ಲಿ ಗರಿಷ್ಠ ಶೇಕಡಾವಾರು ಗುರಿಯನ್ನು ಸಾಧಿಸಿದ್ದಕ್ಕಾಗಿ ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ನೀಡುವ ‘ಡಿಜಿ ಧನ್ ಅವಾರ್ಡ್ಸ್ 2021-22’ರ ಅಡಿಯಲ್ಲಿ ‘ಪ್ರತಿಷ್ಠಾ ಪುರಸ್ಕಾರ’ದ ಗೌರವಕ್ಕೆ ಪಾತ್ರವಾಗಿದೆ.

ಈ ಸಾಧನೆ ಕುರಿತು ಮಾತನಾಡಿದ ಬ್ಯಾಂಕಿನ ಮ್ಯಾನೇಜಿಂಗ್ ಡೈರೆಕ್ಟರ್ ಹಾಗೂ ಸಿಇಓ ಮಹಾಬಲೇಶ್ವರ ಎಂ.ಎಸ್. ಅವರು  ಭಾರತೀಯ ಆರ್ಥಿಕತೆಯಲ್ಲಿ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಬಲಗೊಳಿಸುವಲ್ಲಿ ನಮ್ಮ ರಾಷ್ಟ್ರದ ದೃಷ್ಟಿಕೋನಗಳಿಗೆ ಅನುಗುಣವಾಗಿ ನಮ್ಮ ಬ್ಯಾಂಕ್ ಕಾರ್ಯಚಟುವಟಿಕೆಗಳನ್ನು ನಡೆಸುತ್ತಿರುವುದನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸಿ ಭಾರತ ಸರಕಾರ ಈ ಪ್ರಶಸ್ತಿಯನ್ನು ನೀಡಿರುವುದು ತುಂಬಾ ಸಂತಸ ತಂದಿದೆ.

‘ಕೆಬಿಎಲ್ ವಿಕಾಸ್- 2.0 ಪರಿವರ್ತನಾ ಪ್ರಕ್ರಿಯೆಯ ಭಾಗವಾದ ‘ಕೆಬಿಎಲ್ ನೆಕ್ಸ್ ಅಡಿಯಲ್ಲಿ ಸಂಪೂರ್ಣ ಡಿಜಿಟಲ್ ವ್ಯವಹಾರವನ್ನು ಕೈಗೊಳ್ಳುವತ್ತ ಬ್ಯಾಂಕ್ ಮುನ್ನುಗ್ಗುತ್ತಿದೆ. ಕರ್ಣಾಟಕ ಬ್ಯಾಂಕ್ ತನ್ನ ಫಲಪ್ರದ ಅಸ್ತಿತ್ವದ ನೂರನೇ ವರ್ಷಕ್ಕೆ ಕಾಲಿಡುತ್ತಿರುವ ಈ ಸಂದರ್ಭದಲ್ಲಿ ದೊರೆತಿರುವ ಈ ಪ್ರಶಸ್ತಿಯು ಬ್ಯಾಂಕಿನ ಸಂಸ್ಥಾಪಕರಿಗೆ ಸಂದ ಗೌರವವಾಗಿದೆ ಎಂದು ನುಡಿದರು.

ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ, ಸಂವಹನ ಮತ್ತು ರೈಲ್ವೆ ಸಚಿವರಾಗಿರುವ  ಅಶ್ವಿನಿ ವೈಷ್ಣವ್ ಅವರಿಂದ ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಕರ್ಣಾಟಕ ಬ್ಯಾಂಕಿನ ಪರವಾಗಿ  ಗೋಕುಲದಾಸ್ ಪೈ, ಚೀಫ್ ಬಿಸಿನೆಸ್ ಆಫೀಸರ್ ಹಾಗೂ  ಜಗದೀಶ್ ಕೆ.ಎಸ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಪ್ರಾದೇಶಿಕ ಕಚೇರಿ-ದೆಹಲಿ, ಪ್ರಶಸ್ತಿಯನ್ನು ಸ್ವೀಕರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು