ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್, ಮಂಗಳೂರು ಪೊಲೀಸ್ ಕಮಿಷನರೇಟ್ ಹಾಗೂ 7 ನೇ ಪಡೆ
ಕೆಎಸ್ಆರ್ ಪಿ, ಮಂಗಳೂರು ಘಟಕಗಳ ಸಂಯುಕ್ತ ಆಶ್ರಯದಲ್ಲಿ ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ರಾಘವ ಎಸ್ ಪಡೀಲ್ ನಿವೃತ್ತ ಪೊಲೀಸ್ ನಿರೀಕ್ಷಕರು ಆಗಮಿಸಿ ಗೌರವ ವಂದನೆ ಸ್ವೀಕರಿಸಿದರು. ಮಾನ್ಯ ಡಾ. ಚಂದ್ರಗುಪ್ತ ಐಪಿಎಸ್ ಪೊಲೀಸ್ ಉಪ ಮಹಾ ನಿರೀಕ್ಷಕರು ಪಶ್ಚಿಮ ವಲಯರವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಕುಲದೀಪ್ ಕುಮಾರ್ ಜೈನ್ ಐಪಿಎಸ್ ಪೊಲೀಸ್ ಆಯುಕ್ತರು, ಮಂಗಳೂರು, ಡಾ|| ವಿಕ್ರಮ್ ಅಮಟೆ ಐಪಿಎಸ್ ಪೊಲೀಸ್ ಅಧೀಕ್ಷಕರು ದಕ್ಷಿಣ ಕನ್ನಡ ಜಿಲ್ಲೆ. ಹಾಗೂ ಇತರ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು, ನಿವೃತ್ತ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.