News Karnataka Kannada
Friday, May 03 2024
ಮಂಗಳೂರು

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ ತುಳು ಭಾಷೆಯ ಕವಿತೆ, ಲೇಖನಗಳ ಆಹ್ವಾನ

Karnataka
Photo Credit :

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ ತುಳು ಭಾಷೆ ಸಂಸ್ಕೃತಿ, ಸಾಹಿತ್ಯದ ಬೆಳವಣಿಗೆಗಾಗಿ ಪ್ರತೀ ೩ ತಿಂಗಳಿಗೊಮ್ಮೆ ಪ್ರಕಟಿಸುವ ಮದಿಪು ಸಂಚಿಕೆಯಲ್ಲಿ ಪ್ರಕಟಿಸಲು ತುಳು ಇತಿಹಾಸ, ಸಂಶೋಧನಾ ಲೇಖನಗಳು, ತುಳು ಪುಸ್ತಕ ಪರಿಚಯ, ಮರೆಯಬಾರದ ತುಳು ಮಹನೀಯರು, ತುಳುಕಥೆ/ಕವನ/ಚುಟುಕುಗಳನ್ನು ಆಹ್ವಾನಿಸಲಾಗಿದೆ.

ಹೆಸರು ಮತ್ತು ವಿಳಾಸವಿಲ್ಲದ ಲೇಖನಗಳನ್ನು ಪ್ರಕಟಿಸುವುದಿಲ್ಲ. ಪ್ರಕಟಿತ ಲೇಖನಗಳ ಲೇಖಕರಿಗೆ ಗೌರವ ಸಂಭಾವನೆ ಪಾವತಿಸಲಾಗುವುದು.

ಲೇಖಕರು ಲೇಖನಗಳನ್ನು ತಮ್ಮ ಸಂಪೂರ್ಣ ವಿಳಾಸ ಮತ್ತು ದೂರವಾಣಿ ಸಂಖ್ಯೆಯೊಂದಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ತುಳು ಭವನ, ಅಶೋಕನಗರ ಪೋಸ್ಟ್, ಉರ್ವಸ್ಟೋರ್, ಮಂಗಳೂರು ತಾಲೂಕು- ೫೭೫೦೦೬ ಈ ವಿಳಾಸಕ್ಕೆ ಅಥವಾ tulu.academy@yahoo.co.in ಅಥವಾ ವಾಟ್ಸಪ್ ಸಂಖ್ಯೆ: ೭೪೧೧೫೭೨೧೧೫ ಇದಕ್ಕೆ ಕಳುಹಿಸಿಕೊಡುವಂತೆ ಅಕಾಡೆಮಿಯ ರಿಜಿಸ್ಟಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು