News Karnataka Kannada
Thursday, May 02 2024
ಮಂಗಳೂರು

ಮಂಗಳೂರು: ವಜ್ರದ ಹರಳು ಸಾಗಾಟ ಯತ್ನ,ವಿಮಾನ ನಿಲ್ದಾಣದಲ್ಲಿ ಕಾಸರಗೋಡು ನಿವಾಸಿ ಸರೆ

Kasargod resident Sare tries to smuggle diamond stones at airport
Photo Credit : News Kannada

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ದಲ್ಲಿ ಸಿಐಎಸ್ ಎಫ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ವಿದೇಶಕ್ಕೆ ಕಳ್ಳಸಾಗಣೆ ಮಾಡಲು ಯತ್ನಿಸುತ್ತಿದ್ದ ವಜ್ರದ ಹರಳುಗಳನ್ನು ವಶಪಡಿಸಿಕೊಂಡಿದ್ದಾರೆ.

ದುಬೈಗೆ ತೆರಳಲು ಬಂದಿದ್ದ ಕೇರಳದ ಕಾಸರಗೋಡು ನಿವಾಸಿಯ ಅನುಮಾನಾಸ್ಪದ ವರ್ತನೆ ಹಿನ್ನಲೆಯಲ್ಲಿ ತಪಾಸಣೆಗೆ ಒಳಪಡಿಸಿದ್ದು, ಈ ವೇಳೆ ಪ್ರಯಾಣಿಕನ ಒಳಉಡುಪಿನಲ್ಲಿ ಅಡಗಿಸಿಟ್ಟಿದ್ದ ವಜ್ರದ ಹರಳುಗಳು ಪತ್ತೆಯಾಗಿವೆ. ಒಳಉಡುಪಿನಲ್ಲಿ 13 ಪೌಚ್ ಗಳಲ್ಲಿ ವಜ್ರದ ಹರಳುಗಳನ್ನು ಅಡಗಿಸಿ ಇಡಲಾಗಿತ್ತು. ವಶಪಡಿಸಿ ಕೊಳ್ಳಲಾದ ವಜ್ರಗಳ ಒಟ್ಟು ಮೌಲ್ಯ 1.69 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಆರೋಪಿ ಪ್ರಯಾಣಿಕನನ್ನು ಬಂಧಿಸಿ ಕಸ್ಟಮ್ಸ್ ಅಧಿಕಾರಿಗಳಿಗೆ ಒಪ್ಪಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು