ಮಂಗಳೂರು: ಮೂಡಬಿದಿರೆಯಲ್ಲಿ ನಡೆಯುತ್ತಿರುವ ಜಾಂಬೂರಿಗೆ ರಾಜ್ಯ ಹೊರ ರಾಜ್ಯಗಳಿಂದ ಆಗಮಿಸಿದ ಸ್ಕೌಟ್ಸ್ ಅಂಡ್ ಗೈಡ್ಸ್ ನ 50,000 ಕ್ಕಿಂತಲೂ ಹೆಚ್ಚಿನ ವಿದ್ಯಾರ್ಥಿಗಳು ಪೋಷಕರು ಶಿಕ್ಷಕರು ತಮ್ಮ ಊರುಗಳಿಗೆ ಹಿಂತಿರುಗುವ ವೇಳೆ ಡಿಸೆಂಬರ್ 26 ರಿಂದ 28ರ ವರೆಗೆ ಜಿಲ್ಲೆಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.
ಕಾರ್ಯಕ್ರಮ ಮುಗಿಸಿ ಮರುಳುವಾಗ ಮೂಡಬಿದ್ರೆಯಿಂದ ರಾಜ್ಯದ ವಿವಿಧ ಸ್ಥಳಗಳಿಗೆ ರೈಲು ನಿಲ್ದಾಣಗಳಿಗೆ ಹೆಚ್ಚುವರಿ ಸಾರಿಗೆಗಳ ವ್ಯವಸ್ಥೆ ಮಾಡಿ ವಾಹನಗಳನ್ನು ನಿಯೋಜಿಸಬೇಕಾಗಿರುತ್ತದೆ .
ಆದ್ದರಿಂದ ಧರ್ಮಸ್ಥಳ ಉಪ್ಪಿನಂಗಡಿ ಸುಬ್ರಹ್ಮಣ್ಯ ಕಾಸರಗೋಡು ವಲಯಗಳಲ್ಲಿ ಕಾರ್ಯಾಚರಣೆ ಮಾಡುವ ಬಸ್ಗಳ ಕೊರತೆ ಉಂಟಾಗಲಿದೆ ಸಾರ್ವಜನಿಕರು ಸಹಕರಿಸುವಂತೆ ಹಿರಿಯ ವಿಭಾಗ್ಯ ನಿಯಂತ್ರಣಧಿಕಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ.