ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಅಭಿವೃದ್ದಿಯ ಪಥದಲ್ಲಿ ಸಾಗಲಿ. ಮೇ 28 ರಂದು ಅಡ್ಯಾರ್ ಗಾರ್ಡನ್ ನಲ್ಲಿ ಜರಗುವ ಪಟ್ಲ ಸಂಭ್ರಮವು ಸಂಭ್ರಮದ ಪಥದಲ್ಲಿ ಸಾಗಲಿ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಯುಎಸ್ ಎ ಘಟಕದ ಸಂಚಾಲಕ ಉಳಿ ಯೋಗೀಂದ್ರ ಭಟ್ ತಿಳಿಸಿದರು.
ಬಲ್ಲಾಲ್ ಬಾಗ್ ಬಳಿಯ ಪತ್ತುಮುಡಿಯಲ್ಲಿ ಪಟ್ಲ ಫೌಂಡೇಶನ್ ಟ್ರಸ್ಟ್ ನ ಆಶ್ರಯದಲ್ಲಿ ನಡೆಯುವ ಪಟ್ಲ ಸಂಭ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಪಟ್ಲ ಸಂಭ್ರಮ ವೈವಿದ್ಯತೆಯಿಂದ ಕೂಡಿದ ಕಾರ್ಯಕ್ರಮ. ವೈಭವದ ಮೂಲಕ ಪ್ರಕಾಶಮಾನವಾಗಿ ನಡೆಯಲಿ ಎಂದರು. ಭಾಗವತ ಪಟ್ಲ ಸತೀಶರಿಂದ ಯಕ್ಷಗಾನದ ಕ್ಷೇತ್ರದ ವ್ಯಾಪ್ತಿ ವಿಸ್ತಾರಗೊಂಡಿದೆ. ಪಟ್ಲರು ಯಕ್ಷಗಾನಕ್ಕೆ ಹೊಸ ರೂಪ ಕೊಟ್ಟಿದ್ದಾರೆ, ಹೊಸ ಜನಾಂಗವನ್ನು ಸೃಷ್ಟಿಸಿದ್ದಾರೆ ಎಂದು ಯಕ್ಷಗಾನ ಕಲಾವಿದ ಉಜಿರೆ ಅಶೋಕ್ ಭಟ್ ತಿಳಿಸಿದರು.
ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ ಶೆಟ್ಟಿ ಪಟ್ಲ ಸಂಭ್ರಮದ ರೂಪು ರೇಶೆಗಳನ್ನು ತಿಳಿಸಿದರು.
ವೇದಿಕೆಯಲ್ಲಿ ಭುಜಬಲಿ ಧರ್ಮಸ್ಥಳ, ಡಾ.ಪ್ರಭಾಕರ ಜೋಷಿ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್, ಕೋಶಾಧಿಕಾರಿ ಸುದೇಶ್ ಕುಮಾರ್ ರೈ, ಉಪಾಧ್ಯಕ್ಷ ಮನು ರಾವ್, ಜೊತೆ ಕಾರ್ಯದರ್ಶಿ ರವಿಚಂದ್ರ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಜಗನ್ನಾಥ ಶೆಟ್ಟಿ ಬಾಳ, ಪ್ರದೀಪ್ ಆಳ್ವ ಕದ್ರಿ, ಮಹಿಳಾ ಘಟಕದ ಪದಾಧಿಕಾರಿಗಳಾದ ಆರತಿ ಆಳ್ವ, ಪೂರ್ಣಿಮಾ ಯತೀಶ್ ರೈ ಹಾಗೂ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯಲ್ಲಿ ಕಟೀಲು ಮೇಳದ ಕಲಾವಿದರಾದ ಮವ್ವಾರು ಬಾಲಕೃಷ್ಣ ಮಣಿಯಾಣಿ ಮತ್ತು ಬಪ್ಪನಾಡು ಮೇಳದ ಕಲಾವಿದ ಪಡುಮಲೆ ನಾಗಪ್ಪ ಅವರಿಗೆ ಮನೆ ನಿರ್ಮಾಣಕ್ಕೆ ಧನ ಸಹಾಯ ನೀಡಲಾಯಿತು. ಪುರುಷೋತ್ತಮ ಭಂಡಾರಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ರವಿಚಂದ್ರ ಶೆಟ್ಟಿ ವಂದಿಸಿದರು.