ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಲಿದ್ದು ಈ ನೆರಳಿ ಮೀನುಗಾರರು ಎಚ್ಚರಿಕೆ ವಹಿಸಬೇಕೆಂದು ಹವಾಮಾನ ಇಲಾಖೆ ತಿಳಿಸಿದೆ.
ಡಿಸೆಂಬರ್ 14ರಿಂದ 17ರವರೆಗೆ ಕಡಲು ಪ್ರಕ್ಷುದ್ದ ವಾಗಲಿದ್ದು ಈ ಅವಧಿಯಲ್ಲಿ ಗಾಳಿಯ ವೇಗ ಹೆಚ್ಚರಲಿದೆ ಆದುದರಿಂದ ಮೀನುಗಾರರು ಮೀನುಗಾರಿಕೆಗೆ ಇಳಿಯದೇ ಇರುವುದು ಉತ್ತಮ ಅದರಲ್ಲೂ ಡಿಸೆಂಬರ್ 16ರಂದು ಗಾಳಿಯ ವೇಗ ಅತಿ ಹೆಚ್ಚು ಇರುವ ಸಾಧ್ಯತೆ ಇದೆ. ಈ ವೇಳೆ ಸಂಭವಿಸಬಹುದಾದ ಅನಾಹುತವನ್ನು ತಡೆಗಟ್ಟುವ ಉದ್ದೇಶದಿಂದ ಯಾವುದೇ ದೋಣಿ ಮೀನುಗಾರಿಕೆಗೆ ತೆರಳದಂತೆ ಹಾಗೂ ಈಗಾಗಲೇ ತೆರಳಿಯಲ್ಲಿರುವ ಎಲ್ಲಾ ದೋಣಿಗಳು ಕೂಡಲೇ ಧಡ ಸೇರುವಂತೆ ಮೀನುಗಾರಿಕೆ ಜಂಟ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು ಮಂಗಳೂರು ಕೋಸ್ಟ್ ಗಾರ್ಡ್ ನೀಡಿರುವ ಹವಮಾನ ಮುನ್ಸೂಚನೆ, ಆದರಿಸಿ ಅವರು ಸೂಚನೆ ನೀಡಿದ್ದಾರೆ.