News Karnataka Kannada
Monday, May 06 2024
ಮಂಗಳೂರು

ಮಂಗಳೂರು: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಮದ್ರಸಾ ಶಿಕ್ಷಕ

Madaras
Photo Credit : News Kannada

ಮಂಗಳೂರು: ಮದರಸಾದಲ್ಲಿ 11ರ ಹರೆಯದ ಬಾಲಕನಿಗೆ ದೈಹಿಕ ಹಲ್ಲೆ ಮತ್ತು ಕಿರುಕುಳ ನೀಡಿದ ಉಸ್ತಾನ್‌ನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಹರೇಕಳ ಗ್ರಾಮದ ದೇರಿಕಟ್ಟೆ ಎಂಬಲ್ಲಿ ಮದರಸದ ಶಿಕ್ಷಕ ಹಲ್ಲೆ ನಡೆಸಿರುವ ಘಟನೆ ನಡೆದಿತ್ತು. ನೊಂದ ಬಾಲಕನ ತಂದೆ ಮೊಹಮ್ಮದ್ ಎಂಬವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ

ಬಾಲಕನಿಗೆ ಹಲ್ಲೆ ನಡೆದಿರುವ ಘಟನೆ ಶನಿವಾರ ಸಂಜೆ ವೇಳೆ ಸಂಭವಿಸಿದೆ. ದೂರಿನ ಹಿನ್ನೆಲೆಯಲ್ಲಿ ಶಿಕ್ಷಕ ಉಸ್ತದ್ ಯಹ್ಯಾ ಫೈಝಿಯನ್ನು ಬಂಧಿಸಲಾಗಿದೆ.

ಹರೇಕಳ ದೇರಿಕಟ್ಟೆ ಮಹಮ್ಮದ್ ಎಂಬವರ ಪುತ್ರ 11 ವರ್ಷದ ಬಾಲಕ ಹಫೀಲ್ ಅಹಮ್ಮದ್ ದೇಹದ ಮೇಲೆ ಬಾಸುಂಡೆ ಬರುವಂತೆ ಶಿಕ್ಷಕ ಹೊಡೆದಿದ್ದ. ಮದರಸಕ್ಕೆ ತೆರಳಿದ್ದ ಬಾಲಕನಿಗೆ ಕ್ಷುಲ್ಲಕ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಶಿಕ್ಷಕ ಉಸ್ತದ್ ಯಹ್ಯಾ ಫೈಝಿ ಎಂಬಾತ ಹಲ್ಲೆ ನಡೆಸಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು