News Karnataka Kannada
Monday, May 13 2024
ಮಂಗಳೂರು

ಮಂಗಳೂರು: ಜಿಲ್ಲಾಡಳಿತದಿಂದ ಮಹಾವೀರ ಜಯಂತಿ ಆಚರಣೆ

Mangaluru: Mahaveer Jayanti celebrations in a simple, symbolic manner
Photo Credit : News Kannada

ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಏ.4ರ ಮಂಗಳವಾರ ಭಗವಾನ್ ಮಹಾವೀರ ಜಯಂತಿಯನ್ನು ನಗರದ ತುಳು ಭವನದಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್ ಅವರು ಮಹಾವೀರರ ಪಂಚತತ್ವಗಳಾದ ಅಹಿಂಸಾ, ಸತ್ಯ, ಆಸ್ತೇಯ, ಬ್ರಹ್ಮಚಾರ್ಯ, ಅಪರಿಗ್ರಹ ಆಧ್ಯಾತ್ಮಿಕ ಹಾಗೂ ಲೌಕಿಕ ಸಾಧನೆಗೆ ಅತೀ ಅಗತ್ಯ, ಪ್ರಸ್ತುತ ಜಗತ್ತಿನ ಪರಿಸ್ಥಿತಿಗೆ ಅವರ ತತ್ವಗಳು ಪರಿಹಾರವಾಗಬಲ್ಲದು ಎಂದು ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.

ಕರ್ನಾಟಕ ರಾಜ್ಯ ಜೈನ್‌ ಮಿಲನ್ ನ ರಾಜ್ಯಾಧ್ಯಕ್ಷ ಪುಪ್ಪರಾಜ ಜೈನ್, ದ.ಕ. ಜಿಲ್ಲಾ ಜೈನ್ ಮಿಲನ್ ಅಧ್ಯಕ್ಷ ರತ್ನಾಕರ ಜೈನ್, ಪ್ರಮೋದ್ ಕುಮಾರ್ ಜೈನ್‌, ಮಹಾವೀರ ಜೈನ್ ಹಾಗೂ ಜೈನ್ ಸಮುದಾಯದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್. ಜಿ ಸ್ವಾಗತಿಸಿದರು. ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಭಗವಾನ್ ಮಹಾವೀರರ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು