News Karnataka Kannada
Friday, May 17 2024
ಮಂಗಳೂರು

ಭಯ ಸೃಷ್ಟಿಸುವವರನ್ನು ಬಿಡುವುದೇ ಇಲ್ಲ: ದಿನೇಶ್‌ ಗುಂಡೂರಾವ್‌

Mangaluru: Minister Dinesh Gundu Rao hoists national flag at Nehru Maidan
Photo Credit : News Kannada

ಮಂಗಳೂರು: ಮಂಗಳೂರಿನ ನೆಹರೂ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಸ್ವಾತಂತ್ರ್ಯ ಮಹೋತ್ಸವ ಧ್ವಜಾರೋಹಣಗೈದು ಕವಾಯತು ಪರಿವೀಕ್ಷಣೆ ಮಾಡಿದರು. ಈ ವೇಳೆ ಮಾತನಾಡಿದ ಅವರು ರಾಜ್ಯದಲ್ಲಿ ಹೆಚ್ಚಾಗುತ್ತಿರುವ ನೈತಿಕ ಪೊಲೀಸ್ ಗಿರಿಗೆ ಕಡಿವಾಣ ಹಾಕುತ್ತೇವೆ ಎಂದರು. ಆಗಸ್ಟ್ 15 ರೊಳಗೆ ಡ್ರಗ್ಸ್ ಮುಕ್ತ ಮಂಗಳೂರಿನ ವಾತಾವರಣ ಸೃಷ್ಟಿಯಾಗಬೇಕೆಂದು ಪೊಲೀಸರಿಗೆ ಸ್ಪಷ್ಟ ಸೂಚನೆ ನೀಡಲಾಗಿತ್ತು. ಪೊಲೀಸರು ಈ ನಿಟ್ಟಿನಲ್ಕಿ ಹಲವಾರು ಕಠಿಣ ಕ್ರಮಗಳನ್ನು ಕೈಗೊಂಡಿದ್ದಾರೆ. ಡ್ರಗ್ಸ್‌ ಸೇವನೆ, ಪೂರೈಕೆ ಆರೋಪದಲ್ಲಿ ಹಲವರನ್ನು ಬಂಧಿಸಲಾಗಿದ್ದು, ಪ್ರಕರಣ ದಾಖಲಿಸಲಾಗಿದೆ. ಅದೇ ರೀತಿ ವಿದ್ಯಾರ್ಥಿ ಸಮುದಾಯದಲ್ಲಿ ಡ್ರಗ್ಸ್‌ ವಿರುದ್ಧ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಪೊಲೀಸರು ಹಮ್ಮಿಕೊಂಡಿದ್ದಾರೆ. ಕಳೆದ ಎರಡು ತಿಂಗಳಲ್ಲಿ ಹಲವಾರು ಡ್ರಗ್ಸ್ ಪೆಡ್ಲರ್ ಗಳನ್ನು ಪೊಲೀಸರು ಬಂಧಿಸಲಾಗಿದೆ.

ಭಯ ಸೃಷ್ಟಿಸುವವರನ್ನು ಬಿಡಲ್ಲ: ಜಿಲ್ಲೆಯಲ್ಕಿ ನೈತಿಕ ಪೊಲೀಸ್ ಗಿರಿ ಪ್ರಕರಣಗಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗಿದೆ. ಹಿಂಸಾತ್ಮಕ ರೀತಿಯಲ್ಲಿ ನಡೆದುಕೊಳ್ಳುವವರು, ಕಾನೂನು ಬಾಹಿರ ಚಟುವಟಿಕೆಗಳಿಗೆ ಕೈ ಹಾಕುವವರಿಗೆ ಬಿಸಿ ಮುಟ್ಟಿಸುವ ಕೆಲಸ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಭಯ , ಭೀತಿಯ ವಾತಾವರಣ ಸೃಷ್ಟಿಯಾಗಲು ಬಿಡುವುದಿಲ್ಲ. ಯಾರಿಗೂ ಕಾನೂನನ್ನು ಕೈಗೆತ್ತಿಕೊಳ್ಳಲು ಬಿಡುವುದಿಲ್ಲ. ಈ ನಿಟ್ಟಿನಲ್ಲಿ ಜನರು ಸುಳ್ಳು ಮಾಹಿತಿಗಳಿಂದ ಅಪಪ್ರಚಾರದಿಂದ ವಾತಾವರಣ ಕೆಡಿಸಬಾರದು ಎಂದು ಮನವಿ ಮಾಡಿದರು.

ಪ್ರೋಟೋ ಕಾಲ್‌ ಕನ್‌ಫ್ಯೂಶನ್‌ ನಿವಾರಣೆ ಆಗಿದೆ:
ಶಾಸಕರ ಪ್ರೋಟೋಕಾಲ್ ವಿಚಾರದಲ್ಲಿ ಶಾಸಕರಲ್ಲಿ ಸೃಷ್ಟಿಯಾಗಿದ್ದ ಗೊಂದಲ ನಿವಾರಿಸಲಾಗಿದೆ. ಯಾವುದೇ ಕಾರ್ಯಕ್ರಮವಾದರೂ ಜಿಲ್ಲಾಮಟ್ಟದಲ್ಲಿರುವ ಸಮಿತಿ ನೀಡುವ ನಿರ್ದೇಶನದಂತೆ ಕಾರ್ಯಕ್ರಮ ನಡೆಯಬೇಕು. ಈ ಕುರಿತು ಜಿಲ್ಲಾಧಿಕಾರಿ ಈಗಾಗಲೇ ಸ್ಪಷ್ಟ ಸೂಚನೆಯನ್ನು ನೀಡಿದ್ದಾರೆ. ಯಾರು ಬೇಕಾದರೂ ಜಿಲ್ಲಾಧಿಕಾರಿಗೆ ರೆಕಮಂಡೇಶನ್ ಲೆಟರ್ ಕೊಡಬಹುದು. ಯಾವುದು ಸರಿ. ಯಾವುದು ತಪ್ಪು ಎಂದು ನಿರ್ಧರಿಸಿ ಕೆಲಸ ಮಾಡುವುದು ಮುಖ್ಯ. ಈಗ ಸೃಷ್ಟಿಯಾಗಿದ್ದ ಕನ್ಫ್ಯೂಷನ್ ಮುಂದೆ ಆಗಬಾರದು ಎಂದು ಸೂಚಿಸಿದ್ದೇನೆ. ಪ್ರೋಟೋಕಾಲ್ ಪ್ರಕಾರವೇ ಎಲ್ಲವೂ ನಡೆಯಬೇಕು. ಯಾರ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನಗಳು ಮಾಡಲಾಗುತ್ತಿಲ್ಲ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇವೆ ಎಂದು ಗುಂಡೂರಾವ್‌ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು