ಮಂಗಳೂರು: ನಗರದ ನಾಗೋರಿಯಲ್ಲಿ ಇತ್ತೀಚೆಗೆ ಆಟೋದಲ್ಲಿ ಕುಕ್ಕರ್ಬಾಂಬ್ ಸ್ಪೋಟಗೊಂಡ ಸ್ಥಳಕ್ಕೆ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಸುನೀಲ್ ಕುಮಾರ್ ಅವರು ಕಂಕನಾಡಿ ಪೊಲೀಸರಿಂದ ಮಾಹಿತಿ ಪಡೆದರು. ದ.ಕ ಜಿಲ್ಲಾಧಿಕಾರಿ ರವಿಕುಮಾರ್, ಮೇಯರ್ ಜಯಾನಂದ ಅಂಚನ್ ಸಾಥ್ ನೀಡಿದರು.
ಸ್ಪೋಟಗೊಂಡ ಆಟೋ ರಿಕ್ಷಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.