News Karnataka Kannada
Monday, April 29 2024
ಮಂಗಳೂರು

ಮಂಗಳೂರು: ಕೊಳೆತ ಮೊಟ್ಟೆಗಳ ಪೂರೈಕೆ ವಿರುದ್ಧ ಶಾಸಕ ಭರತ್‌ ಆಕ್ರೋಶ

Mangaluru: MLA Bharath slams supply of rotten eggs
Photo Credit : News Kannada

ಮಂಗಳೂರು: ಇತ್ತೀಚೆಗೆ ಅಂಗನವಾಡಿಗೆ ಕೊಳೆತ ಮೊಟ್ಟೆಗಳು ಪೂರೈಕೆಯಾಗುತ್ತಿರವ ಬಗ್ಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆ ಮಾಡುವ ಗುತ್ತಿಗೆದಾರನನ್ನು ಬ್ಲಾಕ್ ಲಿಸ್ಟ್ ಗೆ ಹಾಕುತ್ತೇನೆಂದು ಗುಡುಗಿದ್ದರು. ಆದರೆ ಇನ್ನೂ ಈ ಸಮಸ್ಯೆ ಪರಿಹಾರವಾದಂತಿಲ್ಲ. ಇದೀಗ ಮತ್ತೆ ಮತ್ತೆ ಮಂಗಳೂರಿನ ಹಲವೆಡೆ ಮತ್ತೆ ಕೊಳೆತ ಮೊಟ್ಟೆ ಪೂರೈಕೆ ಆಗುತ್ತಿರುವುದು ಕಂಡು ಬಂದಿದೆ. ಕಾಟಿಪಳ್ಳದ ಆಸುಪಾಸಿನಲ್ಲಿ ಗರ್ಭಿಣಿಯರಿಗೆ ವಿತರಿಸಲಾಗುವ ಮೊಟ್ಟೆಗಳು ಅಂಗನವಾಡಿಗಳಿಗೆ ಪೂರೈಕೆಯಾಗಿದ್ದು, ಹಾಳಾದ ಸ್ಥಿತಿಯಲ್ಲಿ ದೊರೆತಿದೆ. ಈ ಬಗ್ಗೆ ಶಾಸಕ ಡಾ.ಭರತ್ ಶೆಟ್ಟಿ ವೈ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆಕಾಶಭವನದಲ್ಲಿ ಗರ್ಭಿಣಿ ಮಹಿಳೆ, ಮಗು ಮೊಟ್ಟೆ ತಿಂದು ತಿಂಗಳ ಹಿಂದೆ ಅಸ್ವಸ್ಥರಾಗಿದ್ದರು. ತಾಲೂಕಿನ ಹಲವೆಡೆ ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆಯಾಗಿದೆ. ಈ ಬಾರಿಯೂ ಕೆಲವು ಕಡೆಗಳಿಗೆ ಕೊಳೆತ ಮೊಟ್ಟೆ ಪೂರೈಕೆ ಆಗಿರುವ ಮಾಹಿತಿ ಲಭ್ಯವಾಗಿದೆ. ಸರಕಾರ ಈ ಬಗ್ಗೆ ಸಮರ್ಪಕವಾದ ಕ್ರಮ ಕೈಗೊಳ್ಳಬೇಕು. ಕೇವಲ ಹೆಸರಿಗೆ ಯೋಜನೆ ನೀಡದೆ ಜನರ ಆರೋಗ್ಯದ ಮೇಲೂ ಕಾಳಜಿ ತೋರಬೇಕಿದೆ ಎಂದು ಅವರು ಸರಕಾರವನ್ನು ಒತ್ತಾಯಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು