ಮಂಗಳೂರು: ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಹತ್ಯೆಗೀಡಾದ ಮಸೂದ್ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ,ಹಾಗೂ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ ನೆಟ್ಟಾರುರವರ ಪತ್ನಿ ಮತ್ತು ಹೆತ್ತವರು ವಿಶ್ರಾಂತಿಯಲ್ಲಿರುವುದರಿಂದ ದೂರವಾಣಿ ಮೂಲಕ ಮಾಜಿ ಸಚಿವ ಶಾಸಕ ಯು.ಟಿ.ಖಾದರ್ ಸಾಂತ್ವನ ಹೇಳಿದರು.
ಬೆಂಗಳೂರಿನಿಂದ ಇಂದು ಮುಂಜಾನೆ ಮಂಗಳೂರು ತಲುಪಿದ ವಿಪಕ್ಷ ಉಪ ನಾಯಕ,ಶಾಸಕ ಯು.ಟಿ.ಖಾದರ್ ರವರು ಕಳೆದ ವಾರ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಹತ್ಯೆಯಾಗಿದ್ದ ಮಸೂದ್ ರವರ ಮನೆಗೆ ಹಾಗೂ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಇನ್ನೋರ್ವ ಪ್ರವೀಣ ನೆಟ್ಟಾರುರವರ ಮನೆಗೂ ಕೂಡಾ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಭೇಟಿ ನೀಡಬೇಕಿತ್ತಾದರೂ ಅವರ ಪತ್ನಿ ಮತ್ತು ಹೆತ್ತವರು ವಿಶ್ರಾಂತಿಯಲ್ಲಿರುವುದರಿಂದ ನೆಟ್ಟಾರುರವರ ಚಿಕ್ಕಪ್ಪ ವಿಶ್ವನಾಥ ಅವರಲ್ಲಿ ದೂರವಾಣಿ ಮೂಲಕ ಸಂಪರ್ಕಿಸಿ ಸಾಂತ್ವನ ತಿಳಿಸಿದರು.
ಕಳೆದ ಎರಡು ದಿನಗಳಿಂದ ಸತತ ನಾಯಕರು ಇತರರ ಭೇಟಿಯಿಂದಾಗಿ ಪ್ರವೀಣ ನೆಟ್ಟಾರುರವರ ಪತ್ನಿ ಹಾಗೂ ಹೆತ್ತವರು ವಿಶ್ರಾಂತಿಯಲ್ಲಿದ್ದು ತಾವು ಕರೆ ಮಾಡಿ ಸಾಂತ್ವನ ತಿಳಿಸಿದ್ದು ಮನೆಗೆ ಭೇಟಿ ನೀಡಿದ್ದಷ್ಟೆ ತೃಪ್ತಿಯಾಯಿತೆಂದು ಈ ಸಂದರ್ಭದಲ್ಲಿ ಪ್ರವೀಣ್ ರವರ ಚಿಕ್ಕಪ್ಪ ವಿಶ್ವನಾಥ ರವರು ಯು.ಟಿ.ಖಾದರ್ ರವರಿಗೆ ತಿಳಿಸಿದರು.