ಮಂಗಳೂರು: ಮಹಾನಗರಪಾಲಿಕೆಯ 5ನೇ ಅತ್ತಾವರ ವಾರ್ಡ್ನ ಪ್ರಮುಖ 3ನೇ ಅಡ್ಡರಸ್ತೆಯಲ್ಲಿರುವ ಶ್ರೀ ಕೋಡ್ದಬ್ಬು ದೈವಸ್ಥಾನದ ಪರಿಸರದಲ್ಲಿ ಒಟ್ಟು 1 ಕೋಟಿ 06 ಲಕ್ಷ ರೂ ಮೊತ್ತದ ಮೂರು ಅಭಿವೃದ್ಧಿ ಕಾಮಗಾರಿಗಳಿಗೆ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಇಂದು (ಫೆ.10, ಶುಕ್ರವಾರ) ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಾಮಗಾರಿಗಳ ವಿವರ ಮಾಹಿತಿ ನೀಡಿದರು. ಸ್ಥಳೀಯ ಕಾರ್ಪೊರೇಟರ್ ಶೈಲೇಶ್ ಶೆಟ್ಟಿ ಅವರ ಸಹಕಾರದೊಂದಿಗೆ ಈ ವಿಶೇಷ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.
ರಾಜ್ಯ ಸರಕಾರದ ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ ಅಡಿ ಅನುದಾನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರು ನಗರದ ಅಭಿವೃದ್ಧಿಗಾಗಿ 125 ಕೋಟಿ ರೂ ಅನುದಾನ ಒದಗಿಸಿದ್ದಾರೆ. ಅದರಲ್ಲಿ 1 ಕೋಟಿ 6 ಲಕ್ಷ ರೂ.ಗಳನ್ನು ಕೋಡ್ದಬ್ಬು ದೈವಸ್ಥಾನ ಪರಿಸರದ ಅಭಿವೃದ್ಧಿಗೆ ನೀಡಲಾಗಿದೆ. ಈ ಮೊತ್ತದಲ್ಲಿ 44 ಲಕ್ಷ ರೂ ವೆಚ್ಚದಲ್ಲಿ ದೈವಸ್ಥಾನದ ಹಿಂದೆ ತಡೆಗೋಡೆ ನಿರ್ಮಾಣ, 38 ಲಕ್ಷ ರೂ ವೆಚ್ಚದಲ್ಲಿ ಅಂಬೇಡ್ಕರ್ ಸಮುದಾಯ ಭವನ ಮತ್ತು ಚರಂಡಿ ಕಾಮಗಾರಿ, 25 ಲಕ್ಷ, ರೂ ವೆಚ್ಚದಲ್ಲಿ ಇಂಟರ್ಲಾಕ್ ಅಳವಡಿಕೆ- ನಡೆಸಲಾಗುತ್ತದೆ ಎಂದು ಶಾಸಕರು ವಿವರಿಸಿದರು.
ದಲಿತರು, ಪರಿಶಿಷ್ಟ ಜಾತಿ, ಪಂಗಡಗಳ ಜನರ ಅಭಿವೃದ್ಧಿಗಾಗಿ ಸರಕಾರ ಗರಿಷ್ಠ ಆದ್ಯತೆ ನೀಡಿದ್ದು, ಈ ಸಮಾಜದ ಅಭಿವೃದ್ಧಿಗೆ ಅನುದಾನದ ಬಳಕೆ ಮಾಡಲಾಗುತ್ತದೆ. ಆ ಮೂಲಕ ಪರಿಶಿಷ್ಟ ಜಾತಿ, ಪಂಗಡಕ್ಕೆ ನ್ಯಾಯ ಕೊಡುವ ಕೆಲಸ ಮಾಡಲಾಗುತ್ತಿದೆ ಎಂದು ಶಾಸಕ ಕಾಮತ್ ಹೇಳಿದರು.
ಈ ಸಂದರ್ಭದಲ್ಲಿ ಮ. ನ. ಪಾ ಸದಸ್ಯರಾದ ಶೈಲೇಶ್. ಬಿ. ಶೆಟ್ಟಿ,ಮಹಾನಗರ ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ ಚಂದ್ರ ಶೆಟ್ಟಿ, ಬಿಜೆಪಿ ಮಂಡಲ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ, ಎಸ್. ಸಿ ಮೋರ್ಚಾ ದ ಅಧ್ಯಕ್ಷರಾದ ರಘುವೀರ್ ಬಾಬುಗುಡ್ಡ,ಶಕ್ತಿ ಕೇಂದ್ರದ ಪ್ರಮುಖರಾದ ದರ್ಮೆಂದ್ರ ಅಮೀನ್, ಪುಷ್ಪರಾಜ್ ಶೆಟ್ಟಿ, ಮಹಿಳಾ ಮೋರ್ಚಾ ದ ಉಪಾಧ್ಯಕ್ಷರಾದ ರೂಪ ಕೆ. ಎಸ್, ಲಲಿತಾ, ಬಿಜೆಪಿ ಮುಖಂಡರಾದ ವಸಂತ ಪೂಜಾರಿ, ಬೂತ್ ಅಧ್ಯಕ್ಷರಾದ ಪ್ರಮೋದ್ ಕೊಟ್ಟಾರಿ, ಅರ್ಚನಾ ರೈ, ವಾರ್ಡಿನ ಕಾರ್ಯಕರ್ತರಾದ ನಾರಾಯಣಶೆಟ್ಟಿ, ವಿಕ್ರಮ್ , ಮಧುಸೂದನ್ ಕುಲಾಲ್ ಪ್ರಾಣೇಶ್, ಪ್ರಕಾಶ್, ತರುಣ್, ನವೀನ್, ನಾರಾಯಣ, ಸ್ಥಳೀಯ ಮುಖಂಡರಾದ .ಶ್ರೀಯುತರಾದ ಟಿ.ಹೊನ್ನಯ್ಯ ಗುರಿಕಾರರು,ಬಿ.ಸುಂದರ ಅರ್ಚಕರು,ಜಯಂತ ಪೂಜಾರಿ,ಗಿರೀಶ್ಚಂದ್ರ ಗುರಿಕಾರರು, ತುಕಾರಾಮ, ರಮಾನಂದ, ಶಾಂತಪ್ಪ ಶೇಖರ್, ನೀತಾ,ಉಮೇಶ್, ಶ್ಯಾಮ ಕರ್ಕೇರ, ಶಶಿಕಾಂತ್ ಬಾಬು ಗುಡ್ಡೆ ಮೊದಲಾದವರು ಉಪಸ್ಥಿತರಿದ್ದರು.
ಇನ್ನು ಮುಂದೆ ವಿಧಾನಸೌಧ ಪ್ರವೇಶಕ್ಕೆ ಬೇಕಾಬಿಟ್ಟಿ ಪಾಸ್ಗಳನ್ನು ವಿತರಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಬಾಲಕಿಯನ್ನು ಹತ್ಯೆ ಮಾಡಿರುವ ಕೃತ್ಯ ಸಹಿಸಲಾಗುವುದಿಲ್ಲ. ಬಾಲಕಿಯ ಕುಟುಂಬಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.…
ಬಿಕೆ ಬಿರ್ಲಾ ಒಡೆತನದ ಕೇಸೋರಾಮ್ ಇಂಡಸ್ಟ್ರೀಸ್ ಸಂಸ್ಥೆಯ ಛೇರ್ಮನ್ ಆಗಿದ್ದ ಮಂಜುಶ್ರೀ ಖೇತಾನ್ ನಿಧನರಾಗಿದ್ದಾರೆ.
ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಬೆಂಗಳೂರಲ್ಲಿ ನಡೆದಿದೆ.
ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡಾ 20ರಷ್ಟು ಗ್ರೇಸ್ ಮಾರ್ಕ್ಸ್ ಕೊಟ್ಟು ವಿದ್ಯಾರ್ಥಿಗಳನ್ನ ಪಾಸ್ ಮಾಡಿದ್ದು…
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದೆ.