ಮಂಗಳೂರು: ನಗರದ ಮಿಲಾಗ್ರಿಸ್ ವಾರ್ಡಿನ ಹೈಲಾಂಡ್ ಪರಿಸರದಲ್ಲಿ ಮಳೆಯಿಂದಾಗಿ ಮನೆ ಕುಸಿದ ಸ್ಥಳಕ್ಕೆ ಶಾಸಕರಾದ ವೇದವ್ಯಾಸ್ ಕಾಮತ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮನೆ ಕುಸಿದ ಭೀತಿಯ ಹಿನ್ನೆಲೆಯಲ್ಲಿ ವಾಸವಾಗಿರುವ ಕುಟುಂಬವನ್ನು ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸಿ, ರಾಜ್ಯ ಸರಕಾರದಿಂದ ನೀಡುವ ಪರಿಹಾರ ಧನ ಬಿಡುಗಡೆಗೊಳಿಸಲು ತಕ್ಷಣವೇ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.