News Karnataka Kannada
Sunday, April 28 2024
ಮಂಗಳೂರು

ಮಂಗಳೂರು: 6.98 ಕೋಟಿ ರೂ.ಗಳ ಕಾಮಗಾರಿಗೆ ಶಾಸಕ ವೇದವ್ಯಾಸ್ ರಿಂದ ಶಂಕುಸ್ಥಾಪನೆ

MLA Vedavyas lays foundation stone for works worth Rs 6.98 crore
Photo Credit : News Kannada

ಮಂಗಳೂರು: ಮಂಗಳೂರಿನ ಅಭಿವೃಧ್ಧಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೊಳಿಸಿ ಕೋಟ್ಯಾಂತರ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಿವೆ ಎಂದು ಶಾಸಕರಾದ ಡಿ.ವೇದವ್ಯಾಸ್ ಕಾಮತ್ ಅವರು ತಿಳಿಸಿದರು.

ಅವರು ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ 56ನೇ ಮಂಗಳದೇವಿ ವಾರ್ಡಿನಲ್ಲಿ ಮಂಗಳಾ ದೇವಿ ಬಸ್ ಟರ್ಮಿನಲ್, ಪ್ರಾಥಮಿಕ ಆರೋಗ್ಯ ಕೇಂದ್ರ, ಪಶು ವೈದ್ಯ ಚಿಕಿತ್ಸಾಲಯ ಮತ್ತು ನಗರ ಪಾಲಿಕೆ ಸಿಬ್ಬಂದಿಗಳಿಗೆ ನೂತನ ವಸತಿ ಸಮುಚ್ಚಯ ನಿರ್ಮಾಣ ಕಾಮಗಾರಿಗಳಿಗೆ ಶಿಲನ್ಯಾಸ ನೆರವೇರಿಸಿ ಮಾತನಾಡಿದರು.

ಅಂತರಾಷ್ಟ್ರೀಯ ನಗರವಾಗಿರುವ ಮಂಗಳೂರಿನ ಅಭಿವೃದ್ದಿಗೆ ಸರ್ಕಾರಗಳು ಬದ್ದವಾಗಿವೆ, ಈ ದಿಸೆಯಲ್ಲಿ ನಗರಕ್ಕೆ ಅಗತ್ಯವಿರುವ ಸಾಕಷ್ಟು ಕಾಮಗಾರಿಗಳನ್ನು ಕೈಗೊಂಡು ಅನುಷ್ಠಾನ ಮಾಡಲಾಗುತ್ತಿದೆ, ಮಂಗಳ ದೇವಿ ದೇವಸ್ಥಾನದ ಮುಖ್ಯರಸ್ತೆ ಬದಿಯಲ್ಲಿ ಬಸ್‍ಗಳು ನಿಲ್ಲುವುದರಿಂದ ಓಡಾಡುವ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ.

ನಗರಪಾಲಿಕೆ ಸಿಬ್ಬಂದಿಗಳ ವಸತಿಗೃಹ ಹಳೆಯದಾಗಿದ್ದು ವಾಸಿಸಲು ಕಷ್ಟವಾಗುತ್ತದೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಪಶು ವೈದ್ಯ ಚಿಕಿತ್ಸಾಲಯಗಳಲ್ಲಿ ಮಳೆ ನೀರು ಸೋರಿಕೆಯಾಗುತ್ತಿದೆ, ಆದ್ದರಿಂದ 4 ಕೋಟಿ 98 ಲಕ್ಷ ರೂ.ಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಪಶು ವೈದ್ಯ ಚಿಕಿತ್ಸಾಲಯ ಮತ್ತು ಬಸ್ ಟರ್ಮಿನಲ್ ಮತ್ತು 2 ಕೋಟಿ ರೂ.ಗಳಲ್ಲಿ ನಗರ ಪಾಲಿಕೆ ಸಿಬ್ಬಂದಿಗಳ ವಸತಿ ಸಮುಚ್ಚಯ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದವರು ಹೇಳಿದರು.

ಮೇಯರ್ ಪ್ರೇಮಾನಂದ ಶೆಟ್ಟಿ, ಮಾಜಿ ಮೇಯರ್ ದಿವಾಕರ್, ಮುಖಂಡರಾದ ರವಿಶಂಕರ್ ಮೀಜಾರು, ನಿತಿನ್ ಕುಮಾರ್, ಸ್ಮಾರ್ಟ್ ಸಿಟಿ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಸ್ಥಳೀಯರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು