ಮಂಗಳೂರು: ಶ್ರೀ ನಾಗಬ್ರಹ್ಮ ಮತ್ತು ರಕ್ತೇಶ್ವರಿ ದೇವಸ್ಥಾನ, ಆಶ್ರಯ ಕಾಲೋನಿ ಇದರ 17 ನೇ ವರ್ಷದ ನಾಗದರ್ಶನ ಮತ್ತು ಆಶ್ಲೇಷ ಪೂಜೆಯಲ್ಲಿ ಪಾಲ್ಗೊಂಡು ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೊರೇಟರ್ ಸರಿತಾ ಶಶಿಧರ್, ಬಿಜೆಪಿ ಮಹಾ ಶಕ್ತಿಕೇಂದ್ರ ಕಾರ್ಯದರ್ಶಿ ದಿನಕರ್ ಇಡ್ಯಾ, ದೇವಸ್ಥಾನದ ಅಧ್ಯಕ್ಷರಾದ ರವಿ ಶೆಟ್ಟಿ ಗೌರವಾಧ್ಯಕ್ಷರಾದ ಕೃಷ್ಣ ಕುಕ್ಯಾನ್, ದೇವಸ್ಥಾನದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.