News Karnataka Kannada
Tuesday, April 30 2024
ಮಂಗಳೂರು

ಮಂಗಳೂರು: ಸಮುದ್ರ ತೀರದಲ್ಲಿ ಅಣುಕು ರಕ್ಷಣಾ ಕಾರ್ಯಾಚರಣೆ, ಸಿಬ್ಬಂದಿಗೆ ತರಬೇತಿ

Mangaluru beach
Photo Credit : News Kannada

ಮಂಗಳೂರು: ಉಚ್ಚಿಲ , ಸೋಮೇಶ್ವರ ಸಮುದ್ರ ತೀರದಲ್ಲಿ ಮುಳುಗಡೆಯಾಗಿರುವ ತೈಲ ಹೊತ್ತಿರುವ ಸಿರಿಯಾ ಹಡಗಿನಿಂದ ತೈಲ ಸೋರಿಕೆಯಾದಲ್ಲಿ ಅಥವಾ ಸೋರಿಕೆಯಾಗದಂತೆ ತಡೆಗಟ್ಟುವ ಉದ್ದೇಶದಿಂದ ಜಿಲ್ಲಾಡಳಿತದಿಂದ ರಕ್ಷಣಾ ತಂಡಗಳ ನೇತೃತ್ವದಲ್ಲಿ ಉಳ್ಳಾಲ ಸಮುದ್ರ ತೀರದಲ್ಲಿ ಅಣುಕು ರಕ್ಷಣಾ ಕಾರ್ಯಾಚರಣೆ ಹಾಗೂ 160 ಮಂದಿ ಸಿಬ್ಬಂದಿಗೆ ತರಬೇತಿ ನಡೆಯಿತು.

ಅಣುಕು ಕಾರ್ಯಾಚರಣೆ ಪ್ರದೇಶಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಮಾತನಾಡಿ, ಜಿಲ್ಲೆಯ ವ್ಯಾಪ್ತಿಯ ಸಮುದ್ರ ತೀರದಲ್ಲಿ ತೈಲ ಹೊತ್ತಿರುವ ಸಿರಿಯಾ ಹಡಗು ಮುಳುಗಡೆ ಹಿನ್ನೆಲೆಯಲ್ಲಿ ರಕ್ಷಣಾ ತಂಡಗಳಿಂದ ಅಣುಕು ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿದೆ.

ಹಡಗಿನೊಳಗಡೆ 160 ಮೆಟ್ರಿಕ್‌ ಟನ್‌ ತೈಲ ದಾಸ್ತಾನು ಹಾಗೂ 60 ಮೆಟ್ರಿಕ್‌ ಟನ್‌ ಹಡಗಿನ ಇಂಜಿನ್‌ ಆಯಿಲ್‌ ಇದೆ. ಈ ಕುರಿತು ಡಿ.ಜೆ ಶಿಪ್ಪಿಂಗ್‌, ಹಡಗು ಮಾಲೀಕರು ಹಾಗೂ ಪ್ರಾಡಕ್ಷನ್‌ ಆಂಡ್‌ ಎಂಡೆಮೆಟಿಕ್‌ ಕ್ಲಬ್‌ ಮುಖಾಂತರ ತೈಲ ಸೋರಿಕೆಯಾಗದ ರೀತಿಯಲ್ಲಿ, ಸುಗಮವಾಗಿ ಹೊರತೆಗೆಯುವ ಕುರಿತು ಯೋಜನೆ ರೂಪಿಸಲಾಗುತ್ತಿದೆ.

ಇವರ ಜೊತೆಗೆ ಕೋಸ್ಟ್‌ ಗಾರ್ಡ್‌, ಕರ್ನಾಟಕ ಸರಕಾರ , ಜಿಲ್ಲಾಡಳಿತ ಸೇರಿದಂತೆ ಇಡೀ ರಕ್ಷಣಾ ತಂಡ ಸಹಕರಿಸುತ್ತಿದೆ. ಹಡಗು ತುಂಡಾಗಿ ತೈಲ ಸೋರಿಕೆಯಾದಲ್ಲಿ ಆಯಿಲ್‌ ಸ್ಪಿಲ್‌ ಕ್ರೈಸಿಸ್‌ ತಂಡ, ತಾಂತ್ರಿಕ ತಜ್ಞರ ಮುಖೇನ ಸಲಹೆ ಪಡೆದು 140 ಮಂದಿಗೆ ತರಬೇತಿಯನ್ನು ನೀಡಲಾಗಿದೆ.

ತೈಲ ಸೋರಿಕೆಯಾದರೂ ಪರಿಸರ ನಾಶವಾಗದ ರೀತಿಯಲ್ಲಿ ಹಾಗೂ ಸೋರಿಕೆಯಾದ ಸಂದರ್ಭ ಜನರಿಗೆ ಅರಿವು ಮೂಡಿಸುವ ಕೆಲಸವನ್ನು ಇಂದಿನ ತರಬೇತಿಯಲ್ಲಿ ಮಾಡಲಾಗಿದೆ. ಹಡಗಿನೊಳಗಡೆ ಇದ್ದಂತಹ 15 ಸಿರಿಯನ್‌ ಗಳು ಪೊಲೀಸ್‌ ಕಸ್ಟಡಿಯಲ್ಲಿದ್ದಾರೆ. ಹಡಗಿನೊಳಗಡೆ ಇರುವಂತಹ ತೈಲವನ್ನು ಸುರಕ್ಷಿತವಾಗಿ ಹೊರತೆಗೆದ ನಂತರ ಮುಳುಗಡೆಯ ತನಿಖೆ ನಡೆಯಲಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು