ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಮುಂದುವರೆದಿದೆ. ಧರ್ಮಸ್ಥಳ ದ್ವಾರದ ಬಳಿಯ ಬಸ್ ನಿಲ್ದಾಣದಲ್ಲಿ ಕಳೆದ ರಾತ್ರಿ ರಾತ್ರಿ 9 ಗಂಟೆಗೆ ಮುಸ್ಲಿಂ ಆಟೋ ಚಾಲಕ ತನ್ನ ಆಟೋದಲ್ಲಿ ಹಿಂದು ಹುಡುಗಿಯನ್ನು ಕೂರಿಸಿಕೊಂಡು ಹೋಗುತ್ತಿದ್ದಾಗ ಅಡ್ಡಗಟ್ಟಿ ಹಲ್ಲೆ ನಡೆದಿದೆ.
ಹಲ್ಲೆಗೊಳಗಾದ ವ್ಯಕ್ತಿ ಉಜಿರೆ ನಿವಾಸಿ ಮೊಹಮ್ಮದ್ ಆಶಿಕ್ (22) ಎಂದು ತಿಳಿದುಬಂದಿದೆ. ಹಲ್ಲೆಗೊಳಗಾದ ಆಶಿಕ್ ಚಿಕಿತ್ಸೆಗಾಗಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಬಗ್ಗೆ ಆಶಿಕ್ ಗೆ ಮಾಹಿತಿ ಇಲ್ಲದಿದ್ದು ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.