ಮಂಗಳೂರು: ನೈತಿಕ ಪೊಲೀಸ್ ಗಿರಿಗೆ ಕಾನೂನಿನಲ್ಲಿ ಅವಕಾಶ ಇಲ್ಲ, ಅದನ್ನು ನಡೆಸುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ಮುಖ್ಯಮಂತ್ರಿಗೆ ಕಾನೂನು ಗೊತ್ತಿದೆಯೋ ಇಲ್ಲವೋ ಎಂದು ಪ್ರಶ್ನಿಸಿದರು.
ಕುಕ್ಕರ್ ಸ್ಫೋಟವನ್ನು ಬಿ.ಜೆ.ಪಿ.ಯವರು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ನಮ್ಮ ಪಕ್ಷದ ಅಧ್ಯಕ್ಷರು ಹೇಳಿದ್ದಾರೆಯೆ ಹೊರತು ಬೇರೇನಲ್ಲ ಎಂದವರು ಆ ಕುರಿತ ಪ್ರಶ್ನೆಗೆ ಉತ್ತರಿಸಿದರು.
ಕಾಂಗ್ರೆಸ್ ಭಯೋತ್ಪಾದನೆಯನ್ನು ಪೋಷಿಸುವ ಕೆಲಸ ಮಾಡಿತು ಎಂದು ಬಿ.ಜೆ.ಪಿ.ರಾಜ್ಯಾಧ್ಯಕ್ಷರು ಆರೋಪ ಮಾಡಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ಈಗ ಡಬ್ಬಲ್ ಇಂಜಿನ್ ಸರಕಾರ ಅವರದೇ ಇದೆಯಲ್ಲ, ಅವರನ್ನು ತಡೆದವರು ಯಾರು, ಅವರು ಭಯೋತ್ಪಾದನೆಯನ್ನು ನಿವಾರಿಸಬಹುದಲ್ಲ ಎಂದರು.