News Karnataka Kannada
Sunday, May 05 2024
ಮಂಗಳೂರು

ಮಂಗಳೂರು: ಬಟ್ಟಂಪಾಡಿಯಲ್ಲಿ ಕಡಲ್ಕೊರೆತ, ಅಪಾಯದಂಚಿನಲ್ಲಿ 13ಕ್ಕೂ ಹೆಚ್ಚು ಮನೆಗಳು

More than 13 houses at risk due to sea erosion in Battampady
Photo Credit : News Kannada

ಮಂಗಳೂರು: ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಉಳ್ಳಾಲ ಸೀ ಗ್ರೌಂಡ್ ಬಳಿ ಕಡಲ್ಕೊರೆತ ಮತ್ತೆ ತೀವ್ರ ಗೊಂಡಿದೆ.

ಸೀಗ್ರೌಂಡ್ ಸಮೀಪ ಸಮುದ್ರದ ಅಲೆ ರಸ್ತೆಗೆ ಅಪ್ಪಳಿಸುವ ಹಂತಕ್ಕೆ ತಲುಪಿದೆ. ತೆಂಗಿನ ಮರವೊಂದು ಸಮುದ್ರ ಪಾಲಾಗುವ ಸಾಧ್ಯತೆ ಇದೆ. ಸೀಗ್ರೌಂಡ್ ನಲ್ಲಿ 13ಕ್ಕೂ ಹೆಚ್ಚು ಮನೆಗಳು ಅಪಾಯದಂಚಿನಲ್ಲಿದ್ದು ಭೀತಿಯ ವಾತಾವರಣ ನಿರ್ಮಾಣವಾಗಿದೆ.

ಬಟ್ಟಂಪಾಡಿಯಲ್ಲಿ ಕಡಲ್ಕೊರೆತ ಜೋರಾಗಿದ್ದು, ಕೆಲವು ಮನೆಗಳು ಅಪಾಯ ದಂಚಿನಲ್ಲಿವೆ. ತಡೆಗೋಡೆಗೆ ಹಾಕಿದ ಕಲ್ಲು ಸಮುದ್ರ ಪಾಲಾಗಿವೆ. ಡಾಮರು ರಸ್ತೆಗೆ ಸಮುದ್ರದ ಅಲೆ ಅಪ್ಪಳಿಸುತ್ತಿದ್ದು, ಅರ್ಧ ರಸ್ತೆ ಸಮುದ್ರದ ಮಡಿಲು ಸೇರಿದೆ. ಘಟನಾ ಸ್ಥಳಕ್ಕೆ ಬುಧವಾರ ತಹಶೀಲ್ದಾರ್ ಗುರುಪ್ರಸಾದ್, ಗ್ರಾಮಕರಣಿಕ ಪ್ರಮೋದ್, ಸಹಾಯಕ ನವನೀತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಡಲ್ಕೊರೆತ ತೀವ್ರಗೊಂಡ ಪ್ರದೇಶದಲ್ಲಿ ತಡೆಗೋಡೆ ರಚನೆಗೆ ವ್ಯವಸ್ಥೆ ಮಾಡಲು ಇಲಾಖಾಧಿಕಾರಿಗಳು ನಿರ್ಧರಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು