News Karnataka Kannada
Saturday, May 11 2024
ಮಂಗಳೂರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 8ಕ್ಷೇತ್ರಗಳ ಕಾಂಗ್ರೆಸ್ ಟಿಕೆಟ್ ಗೆ 40ಕ್ಕೂ ಅಧಿಕ ಅರ್ಜಿ

Mangaluru: More than 40 applications have been filed for Congress tickets for eight constituencies in Dakshina Kannada district.
Photo Credit : News Kannada

ಮಂಗಳೂರು: ಆರು ಮಂದಿ ಮಾಜಿ ಶಾಸಕರ ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳ ನಲವತ್ತಕ್ಕೂ ಅಧಿಕ ಮಂದಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಾಗಿ ಎರಡು ಲಕ್ಷ ರೂಪಾಯಿ ಡಿಡಿ ಯೊಂದಿಗೆ ಕೆಪಿಸಿಸಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಕೆ ಅವಧಿಯನ್ನು ನವೆಂಬರ್ 21ರ ವರೆಗೆ ವಿಸ್ತರಿಸಲಾಗಿದ್ದು ಇನ್ನಷ್ಟು ಆಕಾಂಕ್ಷಿಗಳು ಅರ್ಜಿ ಸಲ್ಲಿಸುವ ನಿರೀಕ್ಷೆ ಇದೆ.

2018ರ ಚುನಾವಣೆಯಲ್ಲಿ ಪರಾವಗೊಂಡ ಮಾಜಿಗಳಾದ ರಮಾನಾಥ್ ರೈ ,ವಸಂತ್ ಬಂಗೇರ , ಮೊಇದೀನ್ ಭಾವ , ಜೆಆರ್ ಲೋಬೊ, ಶಕುಂತಲಾ ಶೆಟ್ಟಿ ಮತ್ತೆ ಟಿಕೆಟ್ ಅರ್ಜಿ ಸಲ್ಲಿಸಿದ್ದಾರೆ ಮೂಡಿಬಿದ್ರೆ ಕ್ಷೇತ್ರದಲ್ಲಿ ಶಾಸಕರಾಗಿದ್ದ ಅಭಯ ಚಂದ್ರ ಜೈನ ಇನ್ನೂ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಈ ಹಿಂದೆ ಘೋಷಿಸಿದ ಕಾರಣ ಅರ್ಜಿ ಸಲ್ಲಿಸುವ ಗೋಜಿಗೆ ಹೋಗಿಲ್ಲ , ಕಳೆದ ಬಾರಿ ಕುಂದಾಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಇಂಟೆಕ್ ನಾಯಕರಾಗಿ ರಾಕೇಶ್ ಮಲ್ಲಿ ಬಂಟ್ವಾಳದಿಂದ ಸ್ಪರ್ಧಿಸಲು ಅರ್ಜಿ ಸಲ್ಲಿಸಿದ್ದಾರೆ.

ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಪುತ್ತೂರು ಕ್ಷೇತ್ರಕ್ಕೆ ಅತಿ ಹೆಚ್ಚು ಅರ್ಜಿ ಸಲ್ಲಿಕೆಯಾಗಿದೆ ಸುಳ್ಯ ಮೀಸಲು ಕ್ಷೇತ್ರವಾಗಿ ಇರುವುದು ಮತ್ತು ಮಂಗಳೂರು ನಗರ ಉತ್ತರ ಹಾಗೂ ದಕ್ಷಿಣ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವುದು ಖಚಿತವಾದ ಕಾರಣ ಹೆಚ್ಚಿನ ಆಕಾಂಕ್ಷಿಗಳು ಪುತೂರು ಕ್ಷೇತ್ರದತ್ತ ಕಣ್ಣಿಟ್ಟಿದ್ದಾರೆ.

ಮಂಗಳೂರು ಕ್ಷೇತ್ರದಿಂದ ಮತ್ತೆ ಯುಟಿ ಖಾದರ್ ಅವರಿಗೆ ಟಿಕೆಟ್ ನೀಡುವುದು ಖಚಿತವಾದ ಕಾರಣ ಈ ಕ್ಷೇತ್ರದಲ್ಲಿ ಅರ್ಜಿಯ ಭರಾಟೆ ಕಂಡುಬಂದಿಲ್ಲ. ಮೂಡುಬಿದ್ರಿ ಕ್ಷೇತ್ರದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಮಿಥುನ್ ರೈ ಟಿಕೆಟ್ ಪಡೆಯುವ ಸಾಧ್ಯತೆ ಹೆಚ್ಚಿರುವ ಕಾರಣ ಕೇವಲ ಎರಡು ಅರ್ಜಿ ಸಲ್ಲಿಕೆಯಾಗಿದೆ. ಮೀಸಲು ಕ್ಷೇತ್ರವಾದ ಸುಳ್ಯದಿಂದ ಕೂಡ ಎರಡು ಅರ್ಜಿ ಮಾತ್ರ ಸಲ್ಲಿಕೆಯಾಗಿದೆ ಟಿಕೆಟ್ ಸಿಗುವ ಯಾವುದೇ ಸಾಧ್ಯತೆ ಇಲ್ಲ ಎಂದು ಖಚಿತವಾಗಿ ತಿಳಿದಿದ್ದರೂ ಕೆಲವರು ಪ್ರಚಾರದ ದೃಷ್ಟಿಯಿಂದ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದ ಸುಳ್ಯದಿಂದ ಈ ಹಿಂದೆ ನಾಲ್ಕು ಬಾರಿ ಕಾಂಗ್ರೆಸ್ಸಿಂದ ಸ್ಪರ್ಧಿಸಿಕೊಂಡ ಡಾಕ್ಟರ್ ರಘು ಅವರು ಟಿಕೆಟ್ ಅರ್ಜಿ ಸಲ್ಲಿಸಿಲ್ಲ . ಈ ಬಾರಿ ಅವರ ಪುತ್ರರಾದ ಪ್ರಳದ್ ಬೆಳ್ಳಿ ಪಾಡಿ ಮತ್ತು ಅಭಿಷೇಕ್ ಬೆಳ್ಳಿ ಪಾಡಿ ಅರ್ಜಿ ಸಲ್ಲಿಸಿದ್ದಾರೆ. ಮಂಗಳೂರು ಪಾಲಿಕೆಯ ಮಾಜಿ ಕಾರ್ಪೊರೇಟರ್ ಅಪ್ಪಿ ಸುಳ್ಯದಿಂದ ಟಿಕೆಟ್ ಬಯಸಿ ಅರ್ಜಿ ಹಾಕಿದ್ದಾರೆ. ಟಿಕೆಟ್ ಆಕಾಂಕ್ಷಿಗಳು ಅರ್ಜಿ ಸಲ್ಲಿಸುತ್ತಲೇ ಅಲ್ಲಲ್ಲಿ ಅಪಸ್ವರ ಕೂಡ ಕೆಳಲಾರಂಭಿಸಿದೆ.

ಬೆಳ್ತಂಗಡಿ ಕ್ಷೇತ್ರದಲ್ಲಿ ಹೊರಗಿನಿಂದ ಬಂದವರಿಗೆ ಟಿಕೆಟ್ ನೀಡಬಾರದು ಎಂದು ಮಾಜಿ ಸಚಿವ ಗಂಗಾಧರ ಗೌಡ ಬಹಿರಂಗ ಹೇಳಿಕೆ ನೀಡಿದ್ದಾರೆ. ಪುತ್ತೂರು ಕ್ಷೇತ್ರದಲ್ಲೂ ಇದೇ ರೀತಿ ಬೇಡಿಕೆ ಇದ್ದು ಕಾವು ಹೇಮನಾಥ ಶೆಟ್ಟಿ ಪ್ರಬಲ ಆಕಾಂಕ್ಷಿಯಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು